ಬಿಟ್ಟಿ ಪ್ರಚಾರಕ್ಕಾಗಿ ಚಿಲ್ರೆ ಕೆಲಸ: ತನ್ನ ಸಂಸ್ಥೆಯ ಮಾರ್ಕೆಟಿಂಗ್​ಗಾಗಿ ಫ್ಲೈಓವರ್​ ಮೇಲಿಂದ ಹಣ ಎಸೆದೆ ಎಂದು ತಪ್ಪೊಪ್ಪಿಕೊಂಡ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೆ.ಆರ್.ಮಾರುಕಟ್ಟೆ ಫ್ಲೈಓವರ್​ನಿಂದ ನೋಟುಗಳನ್ನು ಎಸೆದು ಗಮನ ಸೆಳೆದ ವ್ಯಕ್ತಿಯದ್ದು ಬಿಟ್ಟಿ ಪ್ರಚಾರಕ್ಕಾಗಿ ಚಿಲ್ರೆ ಕೆಲಸ ಎಂಬುದು ಸಾಬೀತಾಗಿದೆ. ತಾನು ಪ್ರಚಾರಕ್ಕೆಂದೇ ಹಾಗೆ ಮಾಡಿದ್ದೆ ಎಂಬುದಾಗಿ ಹಣ ಎಸೆದಿದ್ದ ಅರುಣ್ ಎಂಬಾತ ಪೊಲೀಸರ ವಿಚಾರಣೆ ವೇಳೆ ಹೇಳಿಕೊಂಡಿದ್ದಾನೆ. ಪ್ರಚಾರದ ಗೀಳಿಗೆ ಬಿದ್ದ ನಾಗರಬಾವಿಯ ನಿವಾಸಿ ಅರುಣ್ (30) ಕೆ.ಆರ್.ಮಾರುಕಟ್ಟೆ ಮೇಲ್ಸೇತುವೆಯಿಂದ 10 ರೂ. ನೋಟುಗಳನ್ನು ಎಸೆದು ಹುಚ್ಚಾಟ ಮೆರೆದಿದ್ದಾನೆ. ಸಾಲದಕ್ಕೆ ಆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದ್ದು, ಅದು ವೈರಲ್ ಆಗಿತ್ತು. ಹೀಗಾಗಿ … Continue reading ಬಿಟ್ಟಿ ಪ್ರಚಾರಕ್ಕಾಗಿ ಚಿಲ್ರೆ ಕೆಲಸ: ತನ್ನ ಸಂಸ್ಥೆಯ ಮಾರ್ಕೆಟಿಂಗ್​ಗಾಗಿ ಫ್ಲೈಓವರ್​ ಮೇಲಿಂದ ಹಣ ಎಸೆದೆ ಎಂದು ತಪ್ಪೊಪ್ಪಿಕೊಂಡ