ಪ್ರತಿಯೊಬ್ಬರೂ ರಸ್ತೆ ನಿಯಮ ಪಾಲಿಸಿ

blank

ಕೋಲಾರ: ರಸ್ತೆ ಸುರಕ್ಷತಾ ಸಪ್ತಾಹ ಹಾಗೂ ಹೆಲ್ಮೆಟ್​ ಕಡ್ಡಾಯ ಧರಿಸುವ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು ನರಸಾಪುರ ಕೈಗಾರಿಕಾ ಪ್ರದೇಶದ ಅಡ್ವಿಕ್​ ಹೈ ಟೆಕ್​ ಪೆವೇಟ್​ ಲಿಮಿಟೆಡ್​ ಕಂಪನಿ ವತಿಯಿಂದ ಕೈಗಾರಿಕಾ ಪ್ರದೇಶದಲ್ಲಿ ಶುಕ್ರವಾರ ರಸ್ತೆ ಸುರಕ್ಷತೆ ಕುರಿತು ಅರಿವು ಮೂಡಿಸಿ, ಬೈಕ್​ ಜಾಥಾ ನಡೆಸಿ ವಾಹನ ಸವಾರರಿಗೆ ಉಚಿತ ಹೆಲ್ಮೆಟ್​ ವಿತರಿಸಿದರು.
ವೇಮಗಲ್​ ಸರ್ಕಲ್​ ಇನ್​ಸ್ಪೆಕ್ಟರ್​ ಬಿ.ಪಿ ಮಂಜುನಾಥ್​ ಮಾತನಾಡಿ, ಜನಸಾಮಾನ್ಯರಲ್ಲಿ ರಸ್ತೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸುವುದು. ರಸ್ತೆ ಅಪಘಾತ, ಸಾವು-&ನೋವುಗಳ ಬಗ್ಗೆ ಅವರ ಗಮನಕ್ಕೆ ತರುವುದು ಹಾಗೂ ರಸ್ತೆ ನಿಯಮ ಪಾಲಿಸುವಂತೆ ಪ್ರತಿಯೊಬ್ಬರಲ್ಲೂ ಶಿಸ್ತು ಮೂಡಿಸುವುದು ಸಪ್ತಾಹದ ಮುಖ್ಯ ಉದ್ದೇಶ. ರಸ್ತೆ ಸುರಕ್ಷತಾ ನಿಯಮಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡು ಸುರಕ್ಷಿತ ಪ್ರಯಾಣದ ಕಡೆ ಗಮನ ಹರಿಸಬೇಕು ಎಂದರು.
ಕಂಪನಿಯ ಸಂಪನ್ಮೂಲ ಅಧಿಕಾರಿ ಮಾನಸ್​ ಮಾತನಾಡಿ, ಕಂಪನಿಯ ಸಿ.ಎಸ್​.ಆರ್​ ಅನುದಾನದಲ್ಲಿ ಸುಮಾರು 50 ಉಚಿತ ಹೆಲ್ಮೆಟ್​ ಗಳನ್ನು ವಿತರಿಸಲಾಗಿದ್ದು, ಪ್ರತಿ ವರ್ಷ ಕಂಪನಿಯ ಸಿಬ್ಬಂದಿಗೆ ಮಾತ್ರವೇ ನೀಡುತ್ತಿದ್ದು ಈ ವರ್ಷ ಹೊರಗಿನ ವಾಹನ ಸವಾರರಿಗೆ ನೀಡುತ್ತಿದ್ದೇವೆ ಎಂದು ತಿಳಿಸಿದರು,

blank

ಹೆಲ್ಮೆಟ್​ ನೀಡಿದ ಗಣಪತಿ
ನರಸಾಪುರ ಕೈಗಾರಿಕಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಸರ್ವೀಸ್​ ರಸ್ತೆಯಲ್ಲಿ ಹೆಲ್ಮೆಟ್​ ಧರಿಸದೆ ಸವಾರಿ ಮಾಡುತ್ತಿದ್ದ ಸವಾರರಿಗೆ ಮೊದಲು ಗುಲಾಬಿ ಹೂವು ಕೊಟ್ಟು ಜಾಗೃತಿ ಮೂಡಿಸಲಾಯಿತು. ನಂತರ ಗಣಪತಿ ವೇಷ ಧರಿಸಿದವರೊಬ್ಬರು ಸ್ವತ@ ಹೆಲ್ಮೆಟ್​ ಹಾಕದವರನ್ನು ಹಿಡಿದು ಉಚಿತವಾಗಿ ಹೆಲ್ಮೆಟ್​ ನೀಡಿ, ಸಂಚಾರ ನಿಮಯಗಳ ಅರಿವು ಮೂಡಿಸಿದ್ದು ಗಮನ ಸೆಳೆಯಿತು.

Share This Article
blank

ಬಿಸಾಡುವ ಮುನ್ನ ತಿಳಿಯಿರಿ Watermelon Seeds ಪವರ್​​: ಇದರಲ್ಲಿದೆ 5 ನಂಬಲಾಗದ ಆರೋಗ್ಯ ಪ್ರಯೋಜನೆಗಳು

Watermelon Seeds: ಬೇಸಿಗೆಯಲ್ಲಿ ಬಿಸಿಲು ಜೋರಾದ ತಕ್ಷಣ ದೇಹವನ್ನು ತಂಪಾಗಿಸಲು ನಾವು ಹೆಚ್ಚಾಗಿ ಕಲ್ಲಂಗಡಿಯನ್ನು ಆಶ್ರಯಿಸುತ್ತೇವೆ.…

ಈ ಗಿಡಗಳನ್ನು ಬೆಳೆಸಿದರೆ ಸಾಕು, ನಿಮ್ಮ ಮನೆಗೆ ಒಂದೇ ಒಂದು ಸೊಳ್ಳೆಯೂ ಬರುವುದಿಲ್ಲ..Plants

Plants: ಮಳೆಗಾಲ ಬಂತೆಂದರೆ ಸಾಕು ಅನೇಕ ಜನರು ತಮ್ಮ ಮನೆಯಂಗಳದಲ್ಲಿ ವಿವಿಧ ಗಿಡಗಳನ್ನ ನೆಡಲು ಪ್ರಾರಂಭಿಸುತ್ತಾರೆ.…

blank