ಸ್ವಚ್ಛತೆ ಕಾಪಾಡಲು ಎಲ್ಲರೂ ಕೈ ಜೋಡಿಸಿ

blank

ಹನುಮಸಾಗರ: ಮನೆ ಬಳಿ ಕಸದ ವಾಹನ ಬಂದಾಗ ಸಾರ್ವಜನಿಕರು ಹಸಿ ಹಾಗೂ ಒಣ ಕಸ ವಿಂಗಡಿಸಿ ಹಾಕಬೇಕು ಎಂದು ಪಿಡಿಒ ನಿಂಗಪ್ಪ ಮೂಲಿಮನಿ ಹೇಳಿದರು.

blank

ಇಲ್ಲಿನ ಗ್ರಾಪಂ ವತಿಯಿಂದ ಶುಕ್ರವಾರ ಹಮ್ಮಿಕೊಂಡ ಕಸ ಸಂಗ್ರಹಣೆಯ ಕರ ವಸೂಲಾತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಸಾರ್ವಜನಿಕರು ಕಸವನ್ನು ಎಲ್ಲೆಂದರಲ್ಲಿ ಬಿಸಾಡಬಾರದು. ಗ್ರಾಮದ ನೈರ್ಮಲ್ಯ ಕಾಪಾಡುವ ದೃಷ್ಟಿಯಿಂದ ಗ್ರಾಪಂನಿಂದ ಮನೆ ಮನೆಗೆ ತೆರಳಿ ಕಸ ಸಂಗ್ರಹಣೆ ಮಾಡಲಾಗುತ್ತದೆ. ನಂತರ ಆ ಕಸವನ್ನು ಘನ ತ್ಯಾಜ್ಯವಿಲೇವಾರಿ ಘಟಕದಲ್ಲಿ ಸಂಗ್ರಹಣೆ ಮಾಡಲಾಗುತ್ತದೆ. ಸ್ವಚ್ಛತೆ ಕಾಪಾಡಲು ಸಾರ್ವಜನಿಕರು ಗ್ರಾಪಂನೊಂದಿಗೆ ಕೈ ಜೋಡಿಸಬೇಕು ಎಂದರು.

ಗ್ರಾಪಂ ಕಾರ್ಯದರ್ಶಿ ಅಮರೇಶ ಕರಡಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕ ವೀರನಗೌಡ ಪಾಟೀಲ್, ಸಿಬ್ಬಂದಿ ಮಹಾಂತಯ್ಯ ಕೋಮಾರಿ, ಚಂದಯ್ಯ ಹಿರೇಮಠ, ಬಸವರಾಜ ಶಿವಸಿಂಪಿ, ಹನುಮೇಶ ನರೇಗಲ್, ವೀರೇಶ ಕೂರ್ನಾಳ, ಮೈಬೂಬ ಇಟಗಿ ಇತರರಿದ್ದರು.

 

Share This Article
blank

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

blank