More

    ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಿ

    ಚಿಕ್ಕಮಗಳೂರು: ಸಂವಿಧಾನ ಬದ್ಧವಾದ ಹಕ್ಕಾಗಿರುವ ಮತದಾನದಿಂದ ಯಾರೊಬ್ಬರೂ ದೂರ ಉಳಿಯಬಾರದು. ನಮ್ಮ ಮತ ನಮ್ಮ ಹಕ್ಕು ಎಂಬುದನ್ನು ಮನಗಂಡು ಪ್ರತಿಯೊಬ್ಬರೂ ಏ. ೨೬ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಾಪಂ ಇಒ ಪೂರ್ಣಿಮಾ ತಿಳಿಸಿದರು.

    ನಗರದ ತಾಪಂನಿAದ ಆಜಾದ್ ಪಾರ್ಕ್ ವೃತ್ತದವರೆಗೆ ಆಯೋಜಿಸಲಾಗಿದ್ದ ಮತದಾನ ಜಾಗೃತಿ ಅಂಗವಾಗಿ ಕ್ಯಾಂಡಲ್ ಮಾರ್ಚ್ ಗೆ ಚಾಲನೆ ನೀಡಿ ಮಾತನಾಡಿದ ಅವರು, ಚುನಾವಣೆ ಎಂಬ ಪ್ರಜಾಪ್ರಭುತ್ವದ ಹಬ್ಬದಲ್ಲಿ ಮತದಾರರು ಸಂಭ್ರಮದಿAದ ಪಾಲ್ಗೊಳ್ಳಬೇಕು. ತಾಲೂಕು ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ರಂಗೋಲಿ ಸ್ಪರ್ಧೆ, ಬೈಕ್‌ಜಾಥ, ಟ್ರಾÈಕ್ಟರ್ ಜಾಥ, ಸ್ತಿçÃಶಕ್ತಿ ಸಂಘಗಳ ಸಹಯೋಗದಲ್ಲಿ ತಾಲೂಕು ಕಚೇರಿಯಿಂದ ಡಿಸಿ ಕಚೇರಿ ವರೆಗೆ ಜಾಥ ನಡೆಸಲಾಗುತ್ತಿದೆ ಎಂದರು.
    ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಮತದಾನ ಜಾಗೃತಿ ಕಾರ್ಯಕ್ರಮ ಆಯೋಜಿಸಿ ಮತದಾರರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.
    ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಅಧಿಕಾರಿ, ಸಿಬ್ಬಂದಿಗಳು, ಸಾರ್ವಜನಿಕರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts