More

    ಏನೇ ಮಾಡಿದ್ರೂ ಅದು ಬಂದೇ ಬರುತ್ತದೆ, ಎಲ್ಲವೂ ಹಣಕ್ಕಾಗಿ: ನಟಿ ಓವಿಯಾ ಓಪನ್​ ಟಾಕ್​

    ಚೆನ್ನೈ: ರಾಕಿಂಗ್​ ಸ್ಟಾರ್ ಯಶ್ ಜತೆಗೆ ಕಿರಾತಕ ಸಿನಿಮಾ ಮೂಲಕ ಚಂದನವನ ಪ್ರವೇಶಿಸಿದ್ದ ಓವಿಯಾ, ಅದಾದ ಬಳಿಕ ಮಿಸ್ಟರ್ ಮೊಮ್ಮಗ ಸಿನಿಮಾ ಮಾಡಿದ್ದರು. ಕನ್ನಡದಲ್ಲಿ ನಟಿಸಿದ್ದು ಕೇವಲ ಎರಡೇ ಸಿನಿಮಾ ಆದರೂ ಸೂಪರ್​ ಹಿಟ್​ ಕಿರಾತಕ ಸಿನಿಮಾದಿಂದಾಗಿ ಕನ್ನಡಿಗರ ಮನಸ್ಸಿನಲ್ಲಿ ನೆಲೆಸಿದ್ದಾರೆ. ತಮಿಳಿನಲ್ಲಿಯೇ ಹೆಚ್ಚು ಬಿಜಿಯಾಗಿದ್ದ ಒವಿಯಾ ಇದೀಗ ಅಲ್ಲೂ ಕೂಡ ಅವಕಾಶಗಳು ಇಲ್ಲದೆ ಚಿತ್ರರಂಗದಿಂದ ಅಂತರ ಕಾಯ್ದುಕೊಂಡಿದ್ದಾರೆ.

    ಸಿನಿಮಾಗಳ ಅವಕಾಶ ಕಡಿಮೆಯಾದ ಬಳಿಕ ಒವಿಯಾ, ತಮಿಳಿನ ವಿಜಯ್ ಚಾನೆಲ್​ನಲ್ಲಿ ಪ್ರಸಾರವಾದ ಬಿಗ್​ಬಾಸ್​ ರಿಯಾಲಿಟಿ ಶೋನಲ್ಲಿ ಭಾಗವಹಿಸಿ, ತಮ್ಮ ವಿಭಿನ್ನ ಮ್ಯಾನರಿಸಂ​ ಮೂಲಕ ಜನಮನ್ನಣೆ ಗಳಿಸಿದರು. ಶೋ ಮುಗಿಸಿದ ಬಳಿಕವೂ ಓವಿಯಾ ಅವರಿಗೆ ಕೆಲ ಸಿನಿಮಾಗಳಲ್ಲಿ ಮತ್ತೆ ಅವಕಾಶಗಳು ಸಿಕ್ಕವು. ಆದರೆ, ಮತ್ತೆ ಅವಕಾಶಗಳು ಕಡಿಮೆಯಾದವು. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ಯಾವುದೇ ವಿಚಾರದಲ್ಲೂ ಬೋಲ್ಡ್​ ಆಗಿ ಮಾತನಾಡುವ ಮೂಲಕ ಆಗಾಗ ಸುದ್ದಿಯಾಗುತ್ತಿರುತ್ತಾರೆ.

    ಓವಿಯಾ ಸಿನಿಮಾದಲ್ಲಿ ಸಕ್ರಿಯವಾಗಿರದಿದ್ದರೂ ಅವರ ವಿರುದ್ಧದ ವದಂತಿಗಳು ಮತ್ತು ಅಪಪ್ರಚಾರಗಳು ಮಾತ್ರ ಕಡಿಮೆಯಾಗಿಲ್ಲ. ಈ ಬಗ್ಗೆ ಇತ್ತೀಚೆಗೆ ಮಾಧ್ಯಮ ಸಂದರ್ಶನದಲ್ಲಿ ಮಾತನಾಡಿರುವ ಓವಿಯಾ, ವದಂತಿಗಳನ್ನು ಹರಡುವವರಿಗೆ ತಿರುಗೇಟು ನೀಡಿದ್ದಾರೆ.

    ಏನು ಮಾಡಬಹುದು ಅಂದರೆ…
    ನಾವು ಏನೇ ಮಾಡಿದರೂ ನಮ್ಮ ವಿರುದ್ಧ ಅವರು ಮಾತನಾಡುವುದನ್ನು ನಿಲ್ಲಿಸುವುದಿಲ್ಲ. ಏನಾದರೊಂದು ಮಾತನಾಡುತ್ತಲೇ ಇರುತ್ತಾರೆ. ಇದರಿಂದ ಅವರು ಏನೋ ಒಂದನ್ನು ಪಡೆದುಕೊಳ್ಳುತ್ತಾರೆ. ಬಹುಶಃ ಅವರ ಮನಸ್ಸಿಗೆ ಶಾಂತಿ ದೊರಯಬಹುದೇನೋ? ಬಾಯಿಗೆ ಬಂದಂತೆ ಸುಮ್ಮನೆ ಮಾತನಾಡುವುದು ಹಣಕ್ಕಾಗಿ ಮತ್ತು ಟಿಆರ್​ಪಿಗಾಗಿ. ಈ ವದಂತಿಗಳು ಎಲ್ಲ ನಟಿಯರಿಗೂ ಸರ್ವೇ ಸಾಮಾನ್ಯ. ಮಾತನಾಡುವವರನ್ನು ನಾವು ತಡೆಯಲು ಸಾಧ್ಯವಿಲ್ಲ. ಏನು ಮಾಡಬಹುದು ಅಂದರೆ, ವದಂತಿಗಳಿಗೆ ಕಿವಿಗೊಡದೇ ಇರುವುದು ತುಂಬಾ ಒಳ್ಳೆಯದು ಎಂದು ಹೇಳಿದ್ದಾರೆ.

    ಅಂದಹಾಗೆ ಮಲಯಾಳಂ ನಟಿ ಓವಿಯಾ ಅವರು 2010ರಲ್ಲಿ ಕಲಾವಾಣಿ ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಆ ನಂತರ ಮದಯನೈ ಕೂಟಂ, ಕಾಲಕಲಾಪು, ಮರೀನಾ, ಮುದರ್ ಕೂಡಂ, ಯಾಮಿರುಕಾ ಪಯಮೆಂ, 90 ಎಂಎಲ್ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಇದೀಗ ಸಿನಿಮಾಗಳ ಅವಕಾಶಗಳಿಗಾಗಿ ಎದುರು ನೋಡುತ್ತಿದ್ದಾರೆ. (ಏಜೆನ್ಸೀಸ್​)

    ಗಂಡ ಏಕೆ ಬೇಕು ಅದೇ ಸಾಕು! ಜಾಲತಾಣದಲ್ಲಿ ಸಂಚಲನ ಮೂಡಿಸಿತ್ತು ಕಿರಾತಕ ಬೆಡಗಿಯ ಈ ಮಾತು…​

    ನಾನು ಆರ್​ಸಿಬಿಯ ನಿಷ್ಠಾವಂತ ಅಭಿಮಾನಿ ಆದರೆ… ಇಕ್ಕಟ್ಟಿಗೆ ಸಿಲುಕಿದ ರಶ್ಮಿಕಾ ಮಂದಣ್ಣ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts