More

    ಜೆಡಿಎಸ್​ ಜತೆಗಿನ ಮೈತ್ರಿ ಇನ್ನೂ ಸುದೀರ್ಘ ಚರ್ಚೆಯಾಗಿಲ್ಲ: ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ

    ಬಳ್ಳಾರಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್​ ಜೊತೆ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಇನ್ನೂ ಸುದೀರ್ಘ ಚರ್ಚೆಯಾಗಿಲ್ಲ. ಮುಂಬರುವ ದಿನಗಳಲ್ಲಿ ಅದು ಆಗಬಹುದು ಎಂದು ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ ಹೇಳಿದ್ದಾರೆ.

    ಬಳ್ಳಾರಿಯಲ್ಲಿ ಈ ಕುರಿತು ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ರಚನೆಯಾಗಿ ನಾಲ್ಕು ತಿಂಗಳ ಆಡಳಿತ ನೋಡಿದ ಮೇಲೆ ಎಲ್ಲರೂ ವಿರೋಧಿಸುವ ಅವಶ್ಯಕತೆಯಿದೆ. ಸಿದ್ದರಾಮಯ್ಯನವರ ಹಿಂದಿನ ಹಾಗೂ ಈಗಿನ ಆಡಳಿತಕ್ಕೆ ಸಾಕಷ್ಟು ವ್ಯತ್ಯಾಸವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಇದನ್ನೂ ಓದಿ: ಬಹುಕೋಟಿ ಅವ್ಯವಹಾರ; ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ 14 ದಿನಗಳ ನ್ಯಾಯಾಂಗ ಬಂಧನ

    ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ಅವರ ಹೇಳಿಕೆ ಪ್ರಕಾರ ಮಾತುಕತೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ ಎಂಬುದು ಅರ್ಥವಾಗುತ್ತದೆ. ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್​ ಜೊತೆ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಎಲ್ಲಾ ಹಂತಗಳಲ್ಲಿಯೂ ಸುದೀರ್ಘವಾಗಿ ಚರ್ಚೆ ಮಾಡಬೇಕಿದೆ. ಮುಂಬರುವ ದಿನಗಳಲ್ಲಿ ಇದು ಆಗಬಹುದು ಎಂದು ತಿಳಿಸಿದ್ದಾರೆ.

    ಸಿದ್ದರಾಮಯ್ಯನವರು ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಡೆಸಿದಂತಹ ಆಡಳಿತಕ್ಕೂ ಈಗಿನದ್ದಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಆಂತರಿಕವಾಗಿ ಕಾಂಗ್ರೆಸ್​ನಲ್ಲಿ ಬಹಳಷ್ಟು ನಾಯಕರಿಗೆ ಬೇಗುದಿ ಇದ್ದು, ಅದರಲ್ಲಿ ಮೊದಲನೆಯವರಾಗಿ ಹರಿಪ್ರಸಾದ್​ ಎಂದು ಹೇಳಬಹುದು. ಅವರ ಹೇಳಿಕೆಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಲು ನಿರಾಕರಿಸುತ್ತಿರುವುದನ್ನು ಗಮನಿಸಿದರೆ ಹರಿಪ್ರಸಾದ್​ ಕಾಂಗ್ರೆಸ್​ನಲ್ಲಿ ಪ್ರಬಲ ನಾಯಕರಾಗಿರುವುದು ಕಂಡು ಬರುತ್ತದೆ ಎಂದು ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts