More

    ಗೆಲುವಿನ ಖುಷಿಯಲ್ಲಿದ್ದ ಮಾಜಿ ಸಿಎಂ ಸಿದ್ದುಗೆ ಕಹಿ ಸುದ್ದಿ: ಬಾವ ರಾಮೇಗೌಡ ನಿಧನ

    ಮೈಸೂರು: ವರುಣಾ ಕ್ಷೇತ್ರದಲ್ಲಿ ಭರ್ಜರಿ ಗೆಲುವಿನತ್ತ ಮುನ್ನಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಿಹಿ ಸುದ್ದಿಯ ನಡುವೆ ಕಹಿ ಸುದ್ದಿಯೊಂದು ಬಂದೆರಗಿದೆ. ಸಿದ್ದರಾಮಯ್ಯ ಅವರ ಬಾವ ಇಂದು ನಿಧನರಾಗಿದ್ದಾರೆ.

    ಸಿದ್ದರಾಮಯ್ಯ ಅವರ ಸ್ವಂತ ಸಹೋದರಿ ಶಿವಮ್ಮ ಅವರ ಪತಿ ರಾಮೇಗೌಡ ಅವರು ಅನಾರೋಗ್ಯದಿಂದಾಗಿ ಕೊನೆಯುಸಿರೆಳೆದಿದ್ದಾರೆ. ರಾಮೇಗೌಡ ಅವರಿಗೆ 69 ವರ್ಷ ವಯಸ್ಸಾಗಿತ್ತು.

    ಅನಾರೋಗ್ಯ ಹಿನ್ನೆಲೆಯಲ್ಲಿ ರಾಮೇಗೌಡರನ್ನು ಮೈಸೂರಿನ ಜೆಎಸ್​ಎಸ್​ ಆಸ್ಪತ್ರೆಗೆ ಇಂದು ಬೆಳಗ್ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ರಾಮೇಗೌಡ ಅವರು ಮೃತಪಟ್ಟಿದ್ದಾರೆ. ಮೃತರು ಸಿದ್ದರಾಮನಹುಂಡಿಯಲ್ಲಿ ನ್ಯಾಯಬೆಲೆ ಅಂಗಡಿಯನ್ನು ನಡೆಸುತ್ತಿದ್ದರು. ಅವರ ನಿಧನದಿಂದ ಸಿದ್ದು ಕುಟುಂದ ದುಃಖ ಸಾಗರದಲ್ಲಿ ಮುಳುಗಿದೆ. ಇಂದು ಮಧ್ಯಾಹ್ನ ರಾಮೇಗೌಡ ಅವರ ಅಂತಿಮ ಕ್ರಿಯೆ ನೇರವೇರಲಿದೆ.

    ವರುಣಾ ಕ್ಷೇತ್ರದಲ್ಲಿ ಬಿಜೆಪಿಯ ಸೋಮಣ್ಣ ವಿರುದ್ಧ ಸಿದ್ದರಾಮಯ್ಯ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಆದರೆ, ಅವರ ಬಾವ ನಿಧನರಾಗಿರುವ ಸುದ್ದಿ ಸಂಭ್ರಮಾಚರಣೆಯನ್ನು ಕಳೆಗುಂದುವಂತೆ ಮಾಡಿದೆ.

    ಕರ್ನಾಟಕ ಚುನಾವಣಾ ರಣಕಣದಲ್ಲಿ ಘಟಾನುಘಟಿ ನಾಯಕರಿಗೆ ಹಿನ್ನಡೆ!

    ಸಚಿವ ವಿ. ಸೋಮಣ್ಣಗೆ ಎರಡೂ ಕ್ಷೇತ್ರಗಳಲ್ಲೂ ಭಾರೀ ಹಿನ್ನಡೆ

    ಬೇಬಿ ಬಂಪ್ ಫೋಟೋ ಶೇರ್ ಮಾಡಿದ ನಟಿ: ಮಗುವಿನ ತಂದೆ ಯಾರು ಎಂಬುದೇ ಅಚ್ಚರಿಯ ಪ್ರಶ್ನೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts