More

    ಹತ್ತೇ ದಿನದಲ್ಲಿ YSRCP ಜತೆ ಇನ್ಸಿಂಗ್ಸ್ ಮುಗಿಸಿದ ರಾಯುಡು; ಟಿಡಿಪಿ ಪಾರ್ಟಿ ಹೇಳಿದ್ದೇನು ?

    ಆಂಧ್ರಪ್ರದೇಶ: ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು ವೈಎಸ್​ಆರ್​​ಸಿಪಿ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ.

    ಒಂದು ವಾರದ ಹಿಂದೆಯಷ್ಟೇ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಮ್ಮುಖದಲ್ಲಿ ಅವರು ವೈಎಸ್​ಆರ್ ( ಯುವಜನ ಶ್ರಮಿಕ ರೈತ ಕಾಂಗ್ರೆಸ್​ ಪಕ್ಷ )​ ಪಕ್ಷ ಸೇರಿ ರಾಜಕೀಯ ಇನಿಂಗ್ಸ್​ ಆರಂಭಿಸಿದ್ದ ರಾಯುಡು ಇದೀಗ ಸಾಮಾಜಿಕ ಜಾಲತಾಣದ ಮೂಲಕ ಪಕ್ಷವನ್ನು ತೊರೆಯುತ್ತಿರುವುದಾಗಿ ತಿಳಿಸಿದ್ದಾರೆ.

    ಸಾಮಾಜಿಕ ಮಾಧ್ಯಮ ಎಕ್ಸ್​ ಮೂಲಕ ಮಾಹಿತಿ ಹಂಚಿಕೊಂಡಿರುವ ರಾಯುಡು ನಾನು ವೈಎಸ್‌ಆರ್‌ಸಿಪಿ ಪಕ್ಷವನ್ನು ತ್ಯಜಿಸಲು ನಿರ್ಧರಿಸಿದ್ದೇನೆ. ಅಲ್ಲದೆ ಸ್ವಲ್ಪ ಸಮಯದವರೆಗೆ ರಾಜಕೀಯದಿಂದ ದೂರವಿರಲು ಬಯಸಿದ್ದೇನೆ. ನನ್ನ ಮುಂದಿನ ನಡೆಯನ್ನು ಸರಿಯಾದ ಸಮಯದಲ್ಲಿ ತಿಳಿಸುತ್ತೇನೆ. ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ.

    ಅಂಬಾಟಿ ರಾಯುಡು ವೈಎಸ್​ಆರ್​ಸಿಪಿ ಪಕ್ಷವನ್ನು ತೊರೆಯುತ್ತೇನೆ ಎಂದು ಹೇಳಿದ ತಕ್ಷಣ ವಿರೋಧ ಪಕ್ಷವಾದ ತೆಲುಗು ದೇಶಂ ಪಾರ್ಟಿ ದುಷ್ಟರ ಜೊತೆಯಲ್ಲಿ ನಿಮ್ಮ ರಾಜಕೀಯ ಇನ್ನಿಂಗ್ಸ್ ಆಡದಿರುವುದನ್ನು ನೋಡಿ ತುಂಬಾ ಸಂತೋಷವಾಯಿತು. ನಿಮ್ಮ ಮುಂದಿನ ಜೀವನ ಸುಖಕರವಾಗಿರಲಿ ಎಂದು ಎಕ್ಸ್ ನಲ್ಲಿ ಪೋಸ್ಟ್​ ಮಾಡಿದ್ದಾರೆ.

    ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಟಿವಿ ಸೀತಾ-ರಾಮರಿಗೆ ಆಹ್ವಾನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts