ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪ್ರಸಕ್ತ ಐಪಿಎಲ್ ಟೂರ್ನಿಯ 17ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ದ ಪಂದ್ಯದಲ್ಲಿ ಶಶಾಂಕ್ ಸಿಂಗ್ (61*ರನ್, 29 ಎಸೆತ, 6 ಬೌಂಡರಿ, 4 ಸಿಕ್ಸರ್) ಸ್ಫೋಟಕ ಬ್ಯಾಟಿಂಗ್ ಫಲವಾಗಿ ಪಂಜಾಬ್ ಕಿಂಗ್ಸ್ 3 ವಿಕೆಟ್ಗಳ ರೋಚಕ ಗೆಲುವು ಸಾಧಿಸಿತು. ಈ ಗೆಲುವಿನ ಮೂಲಕ ಶಿಖರ್ ಧವನ್ ಬಳಗ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ. ಗುಜರಾತ್ ತಂಡ ತವರು ಅಂಗಣದಲ್ಲಿ ಮೊದಲ ಸೋಲು ಅನುಭವಿಸಿತು.
ಪಂಜಾಬ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಛತ್ತೀಸ್ಗಢ ಮೂಲದ ಬ್ಯಾಟ್ಸ್ಮನ್ ಶಶಾಂಕ್ ಸಿಂಗ್ ಸ್ಫೋಟಕ ಬ್ಯಾಟಿಂಗ್ ಮೂಲಕ ಗೆಲುವಿನಾಸೆಗೆ ಮರುಜೀವ ತುಂಬಿದರು. ಆದರೆ, ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಆಟಗಾರನಿಗೆ ಸಹ ಆಟಗಾರರು ಪ್ರಶಂಶಿಸದಿರುವುದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದು ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ.
ಇದನ್ನೂ ಓದಿ: ವಿರಾಟ್ ಒಬ್ಬನೇ ಒತ್ತಡ ಸಹಿಸಲು ಸಾಧ್ಯವಿಲ್ಲ; ಬ್ಯಾಟ್ಸ್ಮನ್ಗಳ ಅಗತ್ಯ ನೆರವು ಆರ್ಸಿಬಿಗೆ ಬೇಕಿದೆ: ಆಸ್ಟ್ರೇಲಿಯಾ ಕ್ರಿಕೆಟಿಗ
ಈ ಕುರಿತು ಪ್ರತಿಕ್ರಿಯಿಸಿರುವ ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಆಕಾಶ್ ಚೋಪ್ರಾ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ವ್ಯಕ್ತಿ 50 ರನ್ಗಳನ್ನು ಪೂರೈಸಿದಾಗ ಯಾರೂ ಕೂಡ ಇದನ್ನು ಒಪ್ಪಿಕೊಳ್ಳಲು ತಯಾರಿಲ್ಲ. 25 ಎಸೆತಗಳಲ್ಲಿ 50 ರನ್ಗಳನ್ನು ಪೂರೈಸುವ ಮೂಲಕ ತಂಡದ ಪಾಲಿಗೆ ಸಿಪಿಆರ್ ಆಗಿ ಕಾರ್ಯನಿರ್ವಹಿಸಿದ ವ್ಯಕ್ತಿಯನ್ನು ಪ್ರಶಂಶಿಸದೆ ಈ ರೀತಿ ಕುಳಿತುಕೊಂಡಿರುವುದು ನಾಚಿಕೆಗೇಡಿನ ಸಂಗತಿ. ಸೋಲಿನ ಭೀತಿಯಿಂದ ಈ ರೀತಿ ಮಾಡಿದ್ರಾ ಹೇಗೆ ಎಂದು ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಆಕಾಶ್ ಚೋಪ್ರಾ ಪಂಜಾಬ್ ತಂಡವನ್ನು ಪ್ರಶ್ನಿಸಿದ್ದಾರೆ.
ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ನಲ್ಲಿ ಮಾತನಾಡಿದ ನಾಯಕ ಶಿಖರ್ ಧವನ್, ಉತ್ತಮ ಆರಂಭ ಪಡೆಯಬೇಕೆಂದು ಇದ್ದ ನಾವು ಆರಂಭದಲ್ಲೇ ಬೇಗನೆ ವಿಕೆಟ್ಗಳನ್ನು ಕಳೆದುಕೊಂಡೆವು. ಶಶಾಂಕ್ ಬ್ಯಾಟಿಂಗ್ ಮಾಡಿದ ರೀತಿ ನಿಜವಾಗಿಯೂ ಅದ್ಭುತವಾಗಿತ್ತು. ಶಶಾಂಕ್ ಬಹಳ ಸಮಯದ ನಂತರ ಐಪಿಎಲ್ನಲ್ಲಿ ಆಡುತ್ತಿದ್ದಾರೆ ಮತ್ತು ಅವರು ತುಂಬಾ ಚೆನ್ನಾಗಿ ಆಡಿದ್ದಾರೆ ಎಂದು ನಾಯಕ ಶಿಖರ್ ಧವನ್ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ನಲ್ಲಿ ಶಶಾಂಕ್ ಸಿಂಗ್ ಬ್ಯಾಟಿಂಗ್ ವೈಖರಿಯನ್ನು ಹಾಡಿ ಹೊಗಳಿದ್ದಾರೆ.