ಬೆಂಗಳೂರು: ರಾಜಕಾರಣಿಯೊಬ್ಬರ ಪುತ್ರ ಉದ್ಯಮಿಯೊಬ್ಬರ ಪುತ್ರನ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಪಾರ್ಕಿಂಗ್ ವಿಚಾರವಾಗಿ ನಡೆದ ಈ ಗಲಾಟೆ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲನ್ನೂ ಏರಿದೆ. ಈ ನಡುವೆ ಎರಡೂ ಕಡೆಯವರ ನಡುವೆ ರಾಜಿ ಯತ್ನವೂ ನಡೆಯುತ್ತಿದೆ ಎನ್ನಲಾಗಿದೆ.
ಮಾಜಿ ಶಾಸಕ, ಸದ್ಯ ಹಣ್ಣಿ ಗಣಿ ಅಧ್ಯಕ್ಷರಾಗಿರುವ ಮಾನಪ್ಪ ವಜ್ಜಲ್ ಅವರ ಪುತ್ರ ಆಂಜನೇಯ ವಜ್ಜಲ್ ಅವರ ವಿರುದ್ಧ ಈ ಹಲ್ಲೆ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ವಸಂತನಗರ ಎಂಬೆಸಿ ಅಪಾರ್ಟ್ಮೆಂಟ್ ಬಳಿ ಈ ಜಗಳ ನಡೆದಿದೆ. ಈ ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲೂ ಸೆರೆಯಾಗಿದೆ.
ಇದನ್ನೂ ಓದಿ: ‘ರಾಣಿ’ಯನ್ನು ಕೊಂದು ಹೂತಿಟ್ಟ ಭೂಪ; ದೇವಸ್ಥಾನದಲ್ಲೂ ಕದ್ದು ಸಿಕ್ಕಿಬಿದ್ದ; ಇಂದು ಆಕೆಯ ಶವ ಹೊರತೆಗೆದ ಪೊಲೀಸರು..
ಆಂಜನೇಯ ವಜ್ಜಲ್ ಎಂಬೆಸಿ ಹ್ಯಾಬಿಟ್ಯಾಟ್ನಲ್ಲಿ ವಾಸ ಮಾಡುತ್ತಿದ್ದು, ಕಳೆದ ಭಾನುವಾರ ಉದ್ಯಮಿ ದೀಪಕ್ ರೈ ಅವರ ಪುತ್ರ ವಿಕ್ರಮ್ ರೈ ಆ ಅಪಾರ್ಟ್ಮೆಂಟ್ ಬಳಿ ಕಾರು ಪಾರ್ಕಿಂಗ್ ಮಾಡಿದ ವಿಚಾರವಾಗಿ ಗಲಾಟೆ ನಡೆದಿದೆ. ಈ ಗಲಾಟೆಯಲ್ಲಿ ವಿಕ್ರಮ್ ರೈ ಕಣ್ಣಿನ ಮೇಲ್ಭಾಗಕ್ಕೆ ಗಾಯವಾಗಿದೆ.
ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಪೊಲೀಸರು ಎರಡೂ ಕಡೆಯವರನ್ನು ಠಾಣೆಗೆ ಕರೆಸಿದ್ದಾರೆ. ಅಲ್ಲದೆ ಈ ಬಗ್ಗೆ ವಿಕ್ರಮ್ ರೈ ದೂರು ಕೊಟ್ಟರೆ ಸ್ವೀಕರಿಸುವುದಾಗಿ ಪೊಲೀಸರು ಹೇಳಿಕಳುಹಿಸಿದ್ದಾರೆ. ಈ ಮಧ್ಯೆ ಎರಡೂ ಕಡೆಯವರಿಂದ ರಾಜಿ ಪ್ರಯತ್ನವೂ ನಡೆಯುತ್ತಿದೆ ಎನ್ನಲಾಗಿದೆ.
ಇನ್ನೆರಡು ತಿಂಗಳಂತೂ ಬಹಳ ಹುಷಾರಾಗಿರಬೇಕು: ನೀತಿ ಆಯೋಗದ ಸದಸ್ಯರ ಎಚ್ಚರಿಕೆ
ಈತ ಮಕ್ಕಳಿಗೆ ಪಾಠ ಮಾಡುವ ಟೀಚರ್; ಆದರೆ ತನ್ನ ಅಪ್ಪ-ಅಮ್ಮನಿಗೇ ಟಾರ್ಚರ್!; ಮಗನ ಮನೆ ಮುಂದೆಯೇ ತಂದೆ-ತಾಯಿಯ ಪ್ರತಿಭಟನೆ