ತುಮಕೂರು: ಮಾಜಿ ಶಾಸಕರ ಕಾರು ಡಿಕ್ಕಿ ಹೊಡೆದು ರೈತರೊಬ್ಬರ ಕಾಲು ಮುರಿತಕ್ಕೊಳಗಾದ ಘಟನೆ ಸಂಭವಿಸಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ತೊಳಲಿ ಗ್ರಾಮದಲ್ಲಿ ಈ ಅವಘಡ ಉಂಟಾಗಿದೆ. ಗಾಯಾಳುವನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿಯ ಸುರೇಶ್ ಗೌಡ ಅವರ ಫಾರ್ಚೂನರ್ ಕಾರು, ಟಿವಿಎಸ್ ಎಕ್ಸ್ಎಲ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ತೊಳಲಿ ಗ್ರಾಮದ ರೈತ ಸುರೇಶ್ ಎಂಬವರ ಕಾಲು ಮುರಿತಕ್ಕೊಳಗಾಗಿದೆ.
ಮಾಜಿ ಶಾಸಕರು ಮೈಸೂರಿನಿಂದ ತುಮಕೂರು ಕಡೆಗೆ ಸಾಗುತ್ತಿದ್ದು, ರೈತ ಸುರೇಶ್ ತಮ್ಮ ದ್ವಿಚಕ್ರ ವಾಹನದಲ್ಲಿ ಜಮೀನಿನಿಂದ ಜಾನುವಾರುಗಳಿಗೆ ಮೇವು ತೆಗೆದುಕೊಂಡು ಬರುತ್ತಿರುವಾಗ ಈ ಅಪಘಾತ ಸಂಭವಿಸಿದೆ.
ಅಪಘಾತ ಮಾಡಿ ಗಾಯಾಳು ರೈತನ ಮೇಲೆ ಮಾಜಿ ಶಾಸಕರು ಎಗರಾಡಿದ್ದು, ಜನರು ಜಮಾಯಿಸುತ್ತಿದ್ದಂತೆ ಸುಮ್ಮನಾಗಿದ್ದಾರೆ. ಬಳಿಕ ತನ್ನ ಕಾರು ಬಿಟ್ಟು, ಬೇರೊಂದು ಕಾರಿನಲ್ಲಿ ಗಾಯಳುವನ್ನು ಆಸ್ಪತ್ರೆಗೆ ಕಳಿಸಿಕೊಟ್ಟಿದ್ದಾರೆ. ನಾಗಮಂಗಲ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
ಇಲ್ಲಿ ಸದ್ಯಕ್ಕೆ ಪಾನಿಪುರಿ ಮಾರಾಟ ನಿಷೇಧ: ಕಾರಣ ಮತ್ತೇನೂ ಅಲ್ಲ, ಇದು..
ಭ್ರಷ್ಟಾಚಾರದ ಆರೋಪದಲ್ಲಿ ಬಂಧಿತ ಐಎಎಸ್ ಅಧಿಕಾರಿಯ ಪುತ್ರ ಗುಂಡಿಟ್ಟುಕೊಂಡು ಆತ್ಮಹತ್ಯೆ!