More

    ತಮಿಳುನಾಡು ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಎಂಟು ಮಂದಿ ಸಾವು

    ವಿರುದುನಗರ: ತಮಿಳುನಾಡಿನ ವಿರುದುನಗರ ಜಿಲ್ಲೆಯ ವೆಂಬಕೊಟ್ಟೈ ಬಳಿಯ ರಾಮುತೇವನಪಟ್ಟಿಯಲ್ಲಿರುವ ಪಟಾಕಿ ಘಟಕದ ವಿನ್ನರ್‌ನಲ್ಲಿ ಇಂದು (ಫೆ.17) ಹಠಾತ್ ಸ್ಫೋಟ ಸಂಭವಿಸಿದೆ. ಈ ಸ್ಫೋಟದಿಂದ 8 ಜನರು ಸಾವನ್ನಪ್ಪಿದ್ದಾರೆ ಮತ್ತು 10 ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.

    ಇದನ್ನೂ ಓದಿ:ಕ್ರಿಕೆಟಿಗ ಸರ್ಫರಾಜ್ ಖಾನ್ ತಂದೆಗೆ ಥಾರ್ ಬಹುಮಾನ: ಆನಂದ್ ಮಹೀಂದ್ರ

    ತೀವ್ರ ಸುಟ್ಟಗಾಯಗಳಿಂದ ಬಳಲುತ್ತಿದ್ದ ಕಾರ್ಮಿಕರನ್ನು ಶಿವಕಾಶಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟಕವನ್ನು ವಿಜಯ್ ಒಡೆತನದ ಖಾಸಗಿ ಪಟಾಕಿ ಕಾರ್ಖಾನೆ ಎಂದು ಹೇಳಲಾಗಿದೆ.

    ಮುತ್ತುಚಾಮಿಪುರಂ ನಿವಾಸಿ ವಿಘ್ನೇಶ್ (45) ಮಾಲೀಕತ್ವದ ಸತ್ತೂರು ಸಮೀಪದ ರಾಮುತೇವನಪಟ್ಟಿಯಲ್ಲಿರುವ ವಿನ್ನರ್ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಈ ಕಾರ್ಖಾನೆ ಸುಮಾರು 150 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

    ಇದರ ಒಳಗೆ ಸಿಕ್ಕಿಕೊಂಡಿರುವ ಕಾರ್ಮಿಕರನ್ನು ರಕ್ಷಣೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸ್ಫೋಟದ ಬಳಿಕ ಹೊತ್ತಿ ಉರಿಯುತ್ತಿರುವ ಪಟಾಕಿ ತಯಾರಿಕಾ ಕಾರ್ಖಾನೆ ಬೆಂಕಿ ನಂದಿಸಲು ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಗಳು ಧಾವಿಸಿದ್ದಾರೆ. ಸ್ಫೋಟದ ನಂತರ ಸುಮಾರು 3 ಕಟ್ಟಡಗಳು ನೆಲಸಮವಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸ್ಫೋಟಕ್ಕೆ ಕಾರಣ ಏನು? ಎಂಬ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ.

    ‘ಟೆಸ್ಟ್ ಕ್ರಿಕೆಟ್​​ನಲ್ಲಿ 500 ವಿಕೆಟ್: ಅಶ್ವಿನ್‌ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts