More

    ವಿಜೃಂಭಣೆಯ ವೈದ್ಯೇಶ್ವರಸ್ವಾಮಿ ಬ್ರಹ್ಮರಥೋತ್ಸವ

    ಪಿರಿಯಾಪಟ್ಟಣ: ಕೋಟೆಯಲ್ಲಿರುವ ಶ್ರೀ ವೈದ್ಯೇಶ್ವರಸ್ವಾಮಿ ಬ್ರಹ್ಮ ರಥೋತ್ಸವ ಶನಿವಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

    ಮಹಾಶಿವರಾತ್ರಿ ಹಬ್ಬದ ಮಾರನೇ ದಿನ ನಡೆಯುವ ಜಾತ್ರಾ ಮಹೋತ್ಸವಕ್ಕೆ ಭಕ್ತರು ಬೆಳಗ್ಗೆಯಿಂದಲೇ ಶ್ರದ್ಧಾಭಕ್ತಿಯಿಂದ ಆಗಮಿಸಿದರು. ಆದಿವಾಸ ಹೋಮ, ರಥ ಶುದ್ಧಿ, ಕಲಶಾಭಿಷೇಕ, ಮಹಾಮಂಗಳಾರತಿ ಇತರ ಪೂಜಾ ವಿಧಿ ವಿಧಾನಗಳು ಜರುಗಿದವು. ಪೂಜಾ ವಿಧಿ ವಿಧಾನಗಳ ನಂತರ ಶ್ರೀ ವೈದ್ಯೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ಮಂಗಳವಾದ್ಯದೊಂದಿಗೆ ದೇವಾಲಯ ಸುತ್ತಲೂ ಪ್ರದಕ್ಷಿಣೆ ಹಾಕಲಾಯಿತು. ಬೆಳಗ್ಗಿನ 11.30ರ ಶುಭ ಮುಹೂರ್ತದಲ್ಲಿ ಅಲಂಕೃತ ರಥದಲ್ಲಿ ಉತ್ಸವ ಮೂರ್ತಿಯನ್ನು ಕುಳ್ಳಿರಿಸಿ ಪೂಜೆ ಸಲ್ಲಿಸಲಾಯಿತು. ರಥೋತ್ಸವದ ಸಂದರ್ಭದಲ್ಲಿ ಭಕ್ತರು ಹಣ್ಣು ದವನಗಳನ್ನು ಎಸೆಯುವ ಮೂಲಕ ಭಕ್ತಿ ಸಮರ್ಪಿಸಿದರು.

    ಭಕ್ತರಿಗೆ ಮಧ್ಯಾಹ್ನದಿಂದ ರಾತ್ರಿವರೆಗೆ ಅನ್ನ ದಾಸೋಹ ಆಯೋಜಿಸಲಾಗಿತ್ತು. ಜಾತ್ರಾ ಮಹೋತ್ಸವ ಸಮಿತಿ ಸದಸ್ಯರಾದ ಮುರಳಿ, ರಮೇಶ್ ಅಡಿಗ, ಷಣ್ಮುಖರಾವ್, ತಮ್ಮಣ್ಣಯ್ಯ, ರಾಮು, ಪಿ.ಎಸ್.ಹರೀಶ್, ಶ್ರೀನಿವಾಸ್, ಸುರೇಶ್, ರವಿ, ಲವಕುಮಾರ್, ವಿಷಕಂಠಯ್ಯ, ಬಿ.ವಿ.ಜವರೇಗೌಡ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts