More

    ಸೌಲಭ್ಯಗಳ ಬಗ್ಗೆ ತಿಳಿಸಲು ಜಾಲತಾಣಗಳ ಬಳಕೆ

    ಕಂಪ್ಲಿ: ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿ ಗೆಲುವಿಗಾಗಿ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳಲಾಗುವುದು ಎಂದು ಬಳ್ಳಾರಿ ಜಿಲ್ಲಾ ಗ್ರಾಮಾಂತರ ಸಮಿತಿಯ ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾಧ್ಯಕ್ಷ ಎನ್.ಹಬೀಬ್‌ರೆಹಮಾನ್ ತಿಳಿಸಿದರು.

    ಇದನ್ನೂ ಓದಿ: ಗ್ರಾಮೀಣ ಭಾಗದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ

    ಪಟ್ಟಣದ ಶಾಸಕರ ಕಚೇರಿಯಲ್ಲಿ ಜರುಗಿದ ಕಾಂಗ್ರೆಸ್ ಕಾರ್ಯಕರ್ತರ ಸಂಘಟನಾ ಸಭೆಯಲ್ಲಿ ಭಾನುವಾರ ಮಾತನಾಡಿದರು.

    ಮತಗಳನ್ನು ಸೆಳೆಯಲು ವಿಶೇಷ ಕಾರ್ಯಕ್ರಮ

    ಸಾಮಾಜಿಕ ಜಾಲತಾಣಗಳ ಮೂಲಕ ಕಂಪ್ಲಿ, ಸಿರುಗುಪ್ಪ, ಸಂಡೂರು ತಾಲೂಕಿನ ಗ್ರಾಮೀಣ ವಿಭಾಗಗಳಲ್ಲಿನ ಮತದಾರರ ಸಂಪರ್ಕ, ಸಂವಹನಕ್ಕೆ ಹಾಗೂ ಸರ್ಕಾರ ಸೌಲಭ್ಯ, ಯೋಜನೆಗಳ ಮಾಹಿತಿ ನೀಡಲಾಗುವುದು ಎಂದರು.

    ಕೆಪಿಸಿಸಿ ಎಸ್ಸಿ ವಿಭಾಗದ ಬಳ್ಳಾರಿ ಗ್ರಾಮಾಂತರ ಜಿಲ್ಲಾಧ್ಯಕ್ಷ ವೀರಾಂಜನೇಯಲು ಮಾತನಾಡಿ, ಚುನಾವಣೆಯಲ್ಲಿ ಪರಿಶಿಷ್ಟರ ಮತಗಳನ್ನು ಸೆಳೆಯಲು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ, ಕಾರ್ಯಕರ್ತರ ಬೆಂಬಲದಿಂದ ಪಕ್ಷವನ್ನು ಬಲವರ್ಧಿಸಲು ಯೋಜನೆ ರೂಪಿಸಲಾಗುವುದು ಎಂದರು.

    ಶಾಸಕ ಜೆ.ಎನ್.ಗಣೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಶ್ರೀನಿವಾಸರಾವ್, ಚನ್ನಬಸವರಾಜ, ಕಾಂಗ್ರೆಸ್ ಅಲ್ಪಸಂಖ್ಯಾತರ ನಗರ ಅಧ್ಯಕ್ಷ ಕೆ.ಮಸ್ತಾನ್‌ಸಾಬ್, ಪುರಸಭೆ ಸದಸ್ಯರಾದ ಎಂ.ಉಸ್ಮಾನ್, ಹೊನ್ನೂರವಲಿ, ಮುಖಂಡರಾದ ಕೆ.ಷಣ್ಮುಖಪ್ಪ, ಎಂ.ಸಿ.ಮಾಯಪ್ಪ, ಕೆ.ಮನೋಹರ, ಟಿ.ಸುರೇಶರೆಡ್ಡಿ, ಬಿ.ಜಾಫರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts