ಬೆಂಗಳೂರು: ಬಿಬಿಎಂಪಿ ತೆರಿಗೆ ಅಧಿಕಾರಿ ಎಂದು ಸುಳ್ಳು ಹೇಳಿ ಲಂಚ ಪಡೆಯುತ್ತಿದ್ದವನನ್ನು ಎಸಿಬಿ ಬಂಧಿಸಿದೆ. ಚಂದ್ರು ಎಂಬಾತ ಬಂಧಿತ ನಕಲಿ ಅಧಿಕಾರಿ.
ಎಚ್ಎಎಲ್ ಬಿಬಿಎಂಪಿ ಕಚೇರಿಯಲ್ಲಿ ಫ್ಲಾಟ್ ಖಾತೆ ಬದಲಾವಣೆಗೆ ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ದರು. ಈ ವೇಳೆ ಅಲ್ಲೇ ಇದ್ದ ಚಂದ್ರು ತಾನೇ ಟ್ಯಾಕ್ಸ್ ಇನ್ಸ್ಪೆಕ್ಟರ್, 22 ಸಾವಿರ ರೂ. ಲಂಚ ನೀಡಿದರೆ ಮಾತ್ರ ಕೆಲಸ ಮಾಡಿಸಿಕೊಡುವುದಾಗಿ ಹೇಳಿದ್ದ. ಈತನನ್ನು ಸರ್ಕಾರಿ ಅಧಿಕಾರಿ ಎಂದು ನಂಬಿ ವ್ಯಕ್ತಿಯು ಎಸಿಬಿಗೆ ದೂರು ನೀಡಿದ್ದರು.
ಈ ಹಿನ್ನಲೆ ಕಾರ್ಯಾಚರಣೆ ನಡೆಸಿದ ಎಸಿಬಿ ಅಧಿಕಾರಿಗಳು ಈತನನ್ನು ಬಂಧಿಸಿದ ವೇಳೆ ಸತ್ಯ ಬಯಲಾಗಿದೆ. ಈತ ಬಿಬಿಎಂಪಿ ಅಧಿಕಾರಿ ಅಲ್ಲ ಎನ್ನುವುದು ಪತ್ತೆಯಾಗಿದ್ದು, ಇದಕ್ಕೆ ಬಿಬಿಎಂಪಿ ಅಧಿಕಾರಿಗಳೇ ಸಾಥ್ ನೀಡಿರುವ ಅನುಮಾನ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಎಸಿಬಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.