More

    ಒಂದೇ ಕುಟುಂಬದ ಐವರು ಸದಸ್ಯರ ಸಾವು ಪ್ರಕರಣ: ಹಲ್ಲೆಗೆರೆ ಶಂಕರ್ ಜಾಮೀನು ಅರ್ಜಿ ವಜಾ

    ಬೆಂಗಳೂರು: ಬ್ಯಾಡರಹಳ್ಳಿಯಲ್ಲಿ ಒಂದೇ ಕುಟುಂಬದ ಐವರು ಸದಸ್ಯರ ಸಾವು ಪ್ರಕರಣಕ್ಕೆ ಸಂಬಂಸಿದಂತೆ ಮನೆ ಮಾಲೀಕ ಹಲ್ಲೆಗೆರೆ ಶಂಕರ್ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ.

    ಪ್ರಕರಣದಲ್ಲಿ ಶಂಕರ್ ಪೊಲೀಸರಿಂದ ಬಂಧನಕ್ಕೊಳಗಾದ ಬೆನ್ನಲ್ಲೇ ಜಾಮೀನಿಗಾಗಿ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಮಂಗಳವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ. ಮುಂದೆ ಜಾಮೀನಿಗಾಗಿ ಹೈ ಕೋರ್ಟ್ ಮೊರೆ ಹೋಗುವ ಸಾಧ್ಯತೆಗಳಿವೆ. ಸೆ.17ರಂದು ಬ್ಯಾಡರಹಳ್ಳಿಯಲ್ಲಿರುವ ಶಂಕರ್ ಮನೆಯಲ್ಲಿ ಪತ್ನಿ, ಮೂವರು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದರು. ಇವರು ಆತ್ಮಹತ್ಯೆ ಮಾಡಿಕೊಂಡ ಮರುದಿನ ಶಂಕರ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದ. ಆದರೆ, ಆ ಅರ್ಜಿಯೂ ತಿರಸ್ಕೃತಗೊಂಡಿತ್ತು ಎಂದು ತಿಳಿದು ಬಂದಿದೆ.

    ಮತ್ತೊಂದೆಡೆ ಬ್ಯಾಡರಹಳ್ಳಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಆತ್ಮಹತ್ಯೆ ಮಾಡಿಕೊಂಡವರ ಮೊಬೈಲ್, ಲ್ಯಾಪ್‌ಟಾಪ್‌ನಲ್ಲಿದ್ದ ಅಂಶಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಶಂಕರ್ ವಿರುದ್ಧ ಪತ್ತೆಯಾದ ಸಾಕ್ಷ್ಯ ಪರಿಗಣಿಸಿ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ.

    ತಾಯಿಯ ತೆವಲಿಗೆ ಬಲಿಯಾದ ಮಗ; ಅಕ್ರಮ ಸಂಬಂಧಕ್ಕೆ ಅಡ್ಡಿಯಾದವನನ್ನು ಪ್ರಿಯಕರನಿಂದ ಕೊಲ್ಲಿಸಿದ ಅಮ್ಮ!

    ‘… ಸನಿಹಕೆ’ ಬರಲಿದ್ದಾರೆ ಸಿಎಂ: ಡಾ.ರಾಜಕುಮಾರ್ ಮೊಮ್ಮಗಳ ಸಿನಿಮಾದ ಪ್ರೀಮಿಯರ್​ ಶೋ ವೀಕ್ಷಿಸಲಿದ್ದಾರೆ ಬೊಮ್ಮಾಯಿ

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಪ್ರವೇಶ?; ಅವರಿಂದಲೇ ಹೊರಬಿತ್ತು ಸ್ಪಷ್ಟೀಕರಣ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts