ಅಮರಾವತಿ: ಆಂಧ್ರಪ್ರದೇಶ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿದೆ. ಆಂಧ್ರದಲ್ಲಿ ಚುನಾವಣಾ ರಾಜಕೀಯ ಗರಿಗೆದರಿದ್ದು, ಇಂದು (ಶನಿವಾರ) ತೆಲುಗು ನಟ ನಿಖಿಲ್ ಸಿದ್ದಾರ್ಥ್ ತೆಲುಗು ದೇಶಂ ಪಕ್ಷ ಸೇರ್ಪಡೆಯಾಗಿದ್ದಾರೆ.
ಇದನ್ನೂ ಓದಿ: ಆಂಧ್ರಪ್ರದೇಶ ಚುನಾವಣೆ: ಟಿಡಿಪಿಯ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ!
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಿಖಿಲ್ ಅವರು ಸ್ಪರ್ಧಿಸುವ ಬಗ್ಗೆ ಹಲವು ದಿನಗಳಿಂದ ಸುದ್ದಿಯಾಗಿತ್ತು. ನಿಖಿಲ್ ಅವರು ಯಾವ ಪಾರ್ಟಿ ಸೇರಿಕೊಳ್ತಾರೆ. ಎಲ್ಲಿಂದ ಚುನಾವಣೆಗೆ ಸ್ಪರ್ಧೆ ಮಾಡ್ತಾರೆ ಅನ್ನೋದು ಸಸ್ಪೆನ್ಸ್ ಆಗಿತ್ತು. ಅಂತಿಮವಾಗಿ ತೆಲುಗು ದೇಶಂ (ಟಿಡಿಪಿ) ಪಕ್ಷದ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ನಟ ನಿಖಿಲ್ ಈ ಬಾರಿ ಪ್ರತ್ಯಕ್ಷ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎನ್ನಲಾಗಿದೆ. ಆದರೆ ತೆಲುಗು ದೇಶಂ ಪಕ್ಷದ ಪರವಾಗಿ ರಾಜ್ಯಾದ್ಯಂತ ಸ್ಟಾರ್ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಟಿಡಿಪಿ ಅಂತಿಮ ಪಟ್ಟಿ ಬಿಡುಗಡೆ: ತೆಲುಗು ದೇಶಂ ಪಕ್ಷವು 4 ಲೋಕಸಭೆ ಮತ್ತು 9 ವಿಧಾನಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಈ ಪಟ್ಟಿಯನ್ನು ಶುಕ್ರವಾರ ಘೋಷಣೆ ಮಾಡಲಾಗಿದೆ. ವಿಜಯನಗರಂ ಟಿಡಿಪಿ ಸಂಸದ ಅಭ್ಯರ್ಥಿಯಾಗಿ ಅಪ್ಪಲನಾಯ್ಡು ಮತ್ತು ಒಂಗೋಲ್ ಸಂಸದ ಅಭ್ಯರ್ಥಿಯಾಗಿ ಮಾಗುಂಟ ಶ್ರೀನಿವಾಸರೆಡ್ಡಿ ಅವರ ಹೆಸರನ್ನು ಅಂತಿಮಗೊಳಿಸಿದೆ.
ನನ್ನದು ಪಕ್ಕಾ ಲವ್ ಮ್ಯಾರೇಜ್, ಆದರೆ ಒಂದು ಕಂಡೀಷನ್….: ನಟ ವಿಜಯ್ ಮನದಾಳದ ಮಾತು!