ಸುಶಾಂತ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದಕ್ಕೆ ದಿನದಿಂದಕ್ಕೆ ಒತ್ತಡ ಹೆಚ್ಚಾಗುತ್ತಿದೆ. ಇತ್ತೀಚೆಗಷ್ಟೇ ರಾಜ್ಯಸಭಾ ಸಂಸದ ಸುಬ್ರಹ್ಮಣ್ಯಂ ಸ್ವಾಮಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಮನವಿ ಮಾಡಿದ್ದರು.
ಇದನ್ನೂ ಓದಿ: ಕೆಜಿಎಫ್ ಖಳನ ಕ್ರೌರ್ಯ ಕೌತುಕ!; ದತ್ ಜನ್ಮದಿನಕ್ಕೆ ವಿಶೇಷ ಗಿಫ್ಟ್
ಈಗ ಸುಶಾಂತ್ ಸಿಂಗ್ ಅಭಿಮಾನಿಗಳು ಸಹ ಈ ಬಗ್ಗೆ ಪಟ್ಟು ಹಿಡಿದಿದ್ದಾರೆ. ಜೂನ್ 14ರಂದು ಸುಶಾಂತ್ ಸಿಂಗ್ ರಜಪೂತ್, ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ನಂತರ, ಆ ಕೇಸನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಅವರ ಅಭಿಮಾನಿಗಳು ಆಗ್ರಹಿಸಿದ್ದರು. ಆದರೆ, ಕಾರಣಾಂತರಗಳಿಂದ ಸಿಬಿಐಗೆ ಇನ್ನೂ ಕೇಸ್ ಹಸ್ತಾಂತರಿಸಲಾಗಿಲ್ಲ.
ಈ ನಿಟ್ಟಿನಲ್ಲಿ ಅಭಿಮಾನಿಗಳು ಬೀದಿಗೆ ಇಳಿದಿದ್ದಾರೆ. ಕೆಲವರು ಈ ನಿಟ್ಟಿನಲ್ಲಿ, ದೆಹಲಿಯ ಬೀದಿಬೀದಿಗಳಲ್ಲಿ ಹೋರ್ಡಿಂಗ್ಗಳನ್ನು ಹಾಕಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಅವರ ಸಾವನ್ನು ಯಾಕೆ ಕಡೆಗಣಿಸಲಾಗುತ್ತಿದೆ, ಈ ಪ್ರಕರಣವನ್ನು ಇನ್ನೂ ಯಾಕೆ ಸಿಬಿಐಗೆ ಹಸ್ತಾಂತರಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.
ಈ ಹೋರ್ಡಿಂಗ್ಗಳು ಇದೀಗ ಇಂಟರ್ನೆಟ್ನಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಹೋರ್ಡಿಂಗ್ ಹಾಕಿದ್ದಷ್ಟೇ ಅಲ್ಲ, ಆ ಹೋರ್ಡಿಂಗ್ನ ಫೋಟೋಗಳನ್ನು ಸೋಷಿಯಲ್ ಮೀಡಿಯಾ ಮೂಲಕ, ಸುಶಾಂತ್ ಅವರ ಹಲವು ಅಭಿಮಾನಿಗಳು ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ಬಿಗ್ಬಾಸ್ ಶೋ ವಿರುದ್ಧ ಗಂಭೀರ ಆರೋಪ ಮಾಡಿದ ಕಿರಾತಕ ಬೆಡಗಿ ಓವಿಯಾ!
ಈ ಮಧ್ಯೆ, ಸುಶಾಂತ್ ಸಾವಿನ ಪ್ರಕರಣವನ್ನು ಮುಂಬೈ ಪೊಲೀಸ್ ನಡೆಸುತ್ತಿದ್ದು, ಇದುವರೆಗೂ 37 ಜನರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ಖ್ಯಾತ ನಿರ್ದೇಶಕರಾದ ಆದಿತ್ಯ ಚೋಪ್ರಾ, ಸಂಜಯ್ ಲೀಲಾ ಬನ್ಸಾಲಿ ಮುಂತಾದವರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು ಮುಂದಿನ ದಿನಗಳಲ್ಲಿ ಮಹೇಶ್ ಭಟ್, ಕಂಗನಾ ರಣಾವತ್ ಸೇರಿದಂತೆ ಇನ್ನಷ್ಟು ಸೆಲೆಬ್ರಿಟಿಗಳನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಹೇಳಲಾಗುತ್ತಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ‘ರಾಬರ್ಟ್’ ತಂಡದಿಂದ ಬಂತು ಹೊಸ ಪೋಸ್ಟರ್