ಹುಬ್ಬಳ್ಳಿ: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಧಾರವಾಡ-ಹುಬ್ಬಳ್ಳಿ ಇಂದಿರಾ ಕ್ಯಾಂಟಿನ್ಗಳಲ್ಲಿ ಹೋಳಿಗೆ ವಿತರಣೆ ಮಾಡಲಾಯಿತು.
ಡಾ. ಮಯೂರ ಮೋರೆ ಹಾಗೂ ಸಿದ್ದರಾಮಯ್ಯ ಅಭಿಮಾನಿಗಳ ಬಳಗದಿಂದ ಧಾರವಾಡ ಮಿನಿವಿಧಾನಸೌಧ ಆವರಣದಲ್ಲಿರುವ ಇಂದಿರಾ ಕ್ಯಾಂಟಿನ್ನಲ್ಲಿ ಊಟದ ಜೊತೆಗೆ ಹೋಳಿಗೆ ವಿತರಣೆ ಮಾಡಲಾಯಿತು.
ಧಾರವಾಡ-ಹುಬ್ಬಳ್ಳಿ ದಕ್ಷಿಣ ಕನ್ನಡ, ಬಾಗಲಕೋಟೆ ಸೇರಿ ಮೂರು ಜಿಲ್ಲೆಗಳ 17 ಕ್ಯಾಂಟಿನ್ಗಳಲ್ಲಿ ಒಟ್ಟು 9 ಸಾವಿರ ಹೊಳಿಗೆ ವಿತರಣೆ ಮಾಡಲಾಗಿದೆ.
ಇದನ್ನೂ ಓದಿ: ಗಂಗಾಧರ ಅಜ್ಜನ ಹೆಸರಿನಲ್ಲಿ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್
ರಾಜ್ಯದೆಲ್ಲೆಡೆ ಸಂಭ್ರಮಾಚರಣೆ
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಬೀದರ್ನಿಂದ ಚಾಮರಾಜನಗರದವರೆಗೂ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನೋಡಲು ಬೃಹತ್ ಎಲ್.ಇ.ಡಿ ಪರದೆ ವ್ಯವಸ್ಥೆಯನ್ನು ಸಹ ಮಾಡಲಾಗಿತ್ತು.
ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯರಿಗೆ ಪ್ರತಿಜ್ಞಾವಿಧಿ ಭೋದಿಸಿದರು. ದೇವರ ಹೆಸರಿನಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದರು.
ಪದಗ್ರಹಣ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತಮಿಳುನಾಡು ಸಿಎಂ ಸ್ಟಾಲಿನ್, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ನಟ ಕಮಲ್ ಹಾಸನ್, ನಟ ಶಿವರಾಜ್ಕುಮಾರ್, ಗೀತಾ ಶಿವರಾಜ್ಕುಮಾರ್, ರಾಜೇಂದ್ರ ಸಿಂಗ್ ಬಾಬು, ದುನಿಯಾ ವಿಜಯ್, ನಟಿ ರಮ್ಯಾ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದರು.
ದೇವರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ