More

    ಪಂಚರಾಜ್ಯ ಚುನಾವಣೆ ದಿನಾಂಕ ಘೊಷಣೆಯೊಂದಿಗೆ ಬಿಜೆಪಿಯ ವಿದಾಯಕ್ಕೆ ಮುಹೂರ್ತ ಫಿಕ್ಸ್: ಮಲ್ಲಿಕಾರ್ಜುನ ಖರ್ಗೆ

    ನವದೆಹಲಿ: ವರ್ಷಾಂತ್ಯದಲ್ಲಿ ನಡೆಯುವ ಪಂಚರಾಜ್ಯ ಚುನಾವಣೆ ದಿನಾಂಕ ಘೊಷಣೆಯಾಗುವದರೊಂದಿಗೆ ಬಿಜೆಪಿ ಹಾಗೂ ಅದರ ಮಿತ್ರಪಕ್ಷಗಳ ವಿದಾಯಕ್ಕೆ ಮುಹೂರ್ತ ಫಿಕ್ಸ್ ಆಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

    ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು, ಐದು ರಾಜ್ಯಗಲ ಚುನಾವಣೆ ಘೋಷಣೆಯಾಗುವದರೊಂದಿಗೆ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ವಿದಾಯದ ಘೋಷಣೆ ಸಹ ಆಗಿದೆ. ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಬಲದಿಂದ ಜನರ ಬಳಿಗೆ ಹೋಗಲಿದೆ.

    ಇದನ್ನೂ ಓದಿ: ಮೈಸೂರು ದಸರಾ 2023| ಉರ್ದು ಕವಿಗೋಷ್ಠಿಗೆ ಆಕ್ಷೇಪಿಸಿದ ಬಿಜೆಪಿ ಶಾಸಕ ಸುನೀಲ್ ಕುಮಾರ್; ಸರ್ಕಾರದ ವಿರುದ್ಧ ವಾಗ್ದಾಳಿ

    ಸಾರ್ವಜನಿಕರ ಕಲ್ಯಾಣ, ಸಾಮಾಜಿಕ ನ್ಯಾಯ, ಪ್ರಗತಿಪರ ಅಭಿವೃದ್ಧಿ ಕಾಂಗ್ರೆಸ್​ ಪಕ್ ಜನರಿಗೆ ನೀಡುತ್ತಿರುವ ಭರವಸೆಗಳು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಂಚರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

    ರಾಷ್ಟ್ರೀಯ ಚುನಾವಣಾ ಆಯೋಗ ಮದ್ಯಪ್ರದೇಶ, ಛತ್ತೀಸ್​ಗಢ, ರಾಜಸ್ಥಾನ, ಮಿಜೋರಾಂ ಹಾಗೂ ತೆಲಂಗಾಣಕ್ಕೆ ಚುನಾವಣೆಯ ದಿನಾಂಕಗಳನ್ನು ಸೋಮವಾರ ಘೋಷಣೆ ಮಾಡಿದೆ. ನವೆಂಬರ್​ 7ರಿಂದ 30ನೇ ತಾರೀಖಿನವರೆಗೂ ವಿವಿಧ ದಿನಗಳಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್​ 3ರಂದು ಫಲಿತಾಂಶ ಪ್ರಕಟವಾಗಲಿದೆ. ಲೋಕಸಭೆ ಚುನಾವಣೆಗೂ ನಡೆಯುವ ಪಂಚರಾಜ್ಯ ಎಲೆಕ್ಷನ್​ ಅನ್ನು ಸೆಮಿಫೈನಲ್​ ಎಂದು ಬಿಂಬಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts