More

    ರೈತರ ಹಿತಕ್ಕಾಗಿ ಶ್ರಮಿಸಿದ ಡಾ.ಬಾಬು ಜಗಜೀವನರಾಮ್

    ಯಲಬುರ್ಗಾ: ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್ ವಿಚಾರಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಬ್ಲಾಕ್ ಕಾಂಗ್ರೆಸ್ ತಾಲೂಕು ವಕ್ತಾರ ಡಾ.ಶಿವನಗೌಡ ದಾನರಡ್ಡಿ ಹೇಳಿದರು.

    ಇದನ್ನೂ ಓದಿ: ಬಾಬು ಜಗಜೀವನರಾಮ್ ವಿಕಾಸಮುಖಿ ಆರ್ಥಿಕ ಚಿಂತನೆಗಳು

    ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಮ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಜಗಜೀವನ್ ರಾಮ್ ಅವರು ಸ್ವಾತಂತ್ರೃ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸಿದವರು. ಅತ್ಯುತ್ತಮ ಸಂಸದೀಯ ಪಟುವಾಗಿದ್ದು, ದೇಶದ ಉಪಪ್ರಧಾನಿಯಾಗಿ ರೈತರಿಗೆ ಅನೇಕ ಜನಪರ ಕಾರ್ಯಕ್ರಮ ಜಾರಿಗೆ ತಂದು ರೈತರ ಹಿತ ಕಾಪಾಡಿದ್ದಾರೆ ಎಂದರು.

    ಬ್ಲಾಕ್ ಕಾಂಗ್ರೆಸ್‌ನ ಪ್ರಮುಖರಾದ ಶರಣಪ್ಪ ಗಾಂಜಿ, ಹನುಮೇಶ ಕಡೇಮನಿ, ಮಲ್ಲು ಜಕ್ಕಲಿ, ಸೀನಪ್ಪ ನಾಯ್ಕ, ಶರಣಗೌಡ ಬಸಾಪುರ, ಪುನೀತ್ ಕೊಪ್ಪಳ, ರಮೇಶ್ ದೇಶಪಾಂಡೆ, ರಮೇಶ ಕೊಣ್ಣೂರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts