More

    ಆತ್ಮಹತ್ಯೆಗೆ ಶರಣಾದ ರೈತ

    ವಿಜಯವಾಣಿ ಸುದ್ದಿಜಾಲ ನರಗುಂದ

    ಸಾಲಬಾಧೆ ತಾಳದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತನೋರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಪಟ್ಟಣದಲ್ಲಿ ಸೋಮವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ನಡೆದಿದೆ.

    ಪಟ್ಟಣದ ಜಮಲಾಪೂರ ಬಡಾವಣೆಯ ಶಿವಪ್ಪ ಮಹಾದೇವಪ್ಪ ಕವಡೆ (52) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಈತ ಕೃಷಿಗಾಗಿ ನರಗುಂದದ ಸಿಂಡಿಕೇಟ್ ಬ್ಯಾಂಕ್​ನಲ್ಲಿ 3.10 ಲಕ್ಷ ರೂ. ಸಾಲ ಪಡೆದಿದ್ದ. ಕಳೆದ ನಾಲ್ಕೈದು ವರ್ಷಗಳಿಂದ ಸರಿಯಾಗಿ ಬಳೆ ಬಾರದ ಕಾರಣ ಮಾನಸಿಕವಾಗಿ ನೊಂದು ಭಾನುವಾರ ರಾತ್ರಿ ಕುಟುಂಬದವರೆಲ್ಲರೂ ಮಲಗಿದ ನಂತರ ಮನೆ ಪಕ್ಕದ ದನದ ಕೊಟ್ಟಿಗೆಯಲ್ಲಿ ಉಣ್ಣೆಗೆ ಸಿಂಪರಿಸುವ ಕ್ರಿಮಿನಾಶಕ ಸೇವಿಸಿದ್ದಾರೆ.

    ಅವರ ನರಳಾಟ ಕೇಳಿ ಸ್ಥಳಕ್ಕೆ ಬಂದ ಕುಟುಂಬಸ್ಥರು ಶಿವಪ್ಪ ಅವರನ್ನು ನರಗುಂದದ ಸರ್ಕಾರಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ದುರ್ದೈವವಶಾತ್ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ಮೃತರ ಪುತ್ರ ತುಕಾರಾಮ ಕವಡೆ ತಿಳಿಸಿದ್ದಾರೆ.

    ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts