More

    ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

    ಹಿರೇಕೆರೂರ: ಸಾಲ ಬಾಧೆ ತಾಳಲಾರದೆ ರೈತ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹಾದ್ರಿಹಳ್ಳಿ ಗ್ರಾಮದಲ್ಲಿ ಶನಿವಾರ ಬೆಳಗ್ಗೆ 5.30ರ ಸುಮಾರಿಗೆ ಸಂಭವಿಸಿದೆ.

    ಗ್ರಾಮದ ಶೇಖಪ್ಪ ಮಲ್ಲಪ್ಪ ಗಿಡ್ಡಪ್ಪಗೌಡ್ರ (58) ಆತ್ಮಹತ್ಯೆ ಮಾಡಿಕೊಂಡ ರೈತ. 3 ಎಕರೆ ಜಮೀನು ಹೊಂದಿದ್ದ ಇವರು ಪಟ್ಟಣದ ಭಾರತೀಯ ಸ್ಟೇಟ್ ಬ್ಯಾಂಕ್​ನಲ್ಲಿ 4.50 ಲಕ್ಷ ರೂ., ಸ್ತ್ರೀ ಶಕ್ತಿ ಸಂಘದಲ್ಲಿ 1 ಲಕ್ಷ ರೂ. ಹಾಗೂ ಕೈಗಡವಾಗಿ 70 ಸಾವಿರ ರೂ. ಸಾಲ ಮಾಡಿದ್ದರು. ಸಾಲ ತೀರಿಸಲಾಗದೆ ನೊಂದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಅವರಿಗೆ ಪತ್ನಿ, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು- ಬಳಗವಿದೆ. ಹಿರೇಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts