More

    ತಾಲೂಕು ಕಚೇರಿ ಮುಂದೆಯೇ ತನ್ನ ಹೊಟ್ಟೆಗೆ ತಾನೇ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ‌ ರೈತ..!

    ಚಿಕ್ಕಬಳ್ಳಾಪುರ: ಪಿತ್ರಾರ್ಜಿತ ಆಸ್ತಿ ಹಂಚಿಕೆಯ ವಿವಾದದ ಹಿನ್ನಲೆಯಲ್ಲಿ ಸೂಕ್ತ ಪರಿಹಾರ ಸಿಗದೇ ರೈತನೊಬ್ಬ ತನ್ನಷ್ಟಕ್ಕೆ ತಾನೇ ಚಾಕುವಿನಿಂದ ತಿವಿದುಕೊಂಡು ಆತ್ಮಹತ್ಯೆಗೆ‌ ಯತ್ನಿಸಿ ಆಸ್ಪತ್ರೆಗೆ ದಾಖಲಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ನಗರದಲ್ಲಿ ನಡೆದಿದೆ.

    ಚಾಕುವಿನಿಂದ ತಿವಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಜಗನ್ನಾಥ (63) ಎಂಬುವರೇ ಆತ್ಮಹತ್ಯೆಗೆ ಯತ್ನಿಸಿದ ರೈತರಾಗಿದ್ದಾರೆ.

    ಇದನ್ನೂ ಓದಿರಿ: ಮಕ್ಕಳೆದುರೇ ಹೆಂಡತಿ, ಅತ್ತೆಯನ್ನು ಬರ್ಬರವಾಗಿ ಕೊಂದ ಗಂಡ! ಕೊಲೆ ಮಾಡಿ ಸ್ವಲ್ಪ ಹೊತ್ತಲ್ಲೇ ಅಸ್ವಸ್ಥನಾಗಿ ಬಿದ್ದ

    ಗೌರಿಬಿದನೂರು ತಾಲೂಕಿನ ಗಂಗಸಂದ್ರ ಗ್ರಾಮದ ತೋಟದ ಮನೆಯಲ್ಲಿ ಲೇಟ್ ಸಿದ್ದಪ್ಪನವರ ಐದು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯ ಹಂಚಿಕೆಯ ವಿವಾದ ಸುಮಾರು ವರ್ಷಗಳಿಂದ ಸಾಕಷ್ಟು ತಗಾದೆಗಳಿಂದ ಕೂಡಿತ್ತು. ಆದರೆ, ಅಣ್ಣ-ತಮ್ಮಂದಿರು ಸೇರಿ ಮಾತುಕತೆ ನಡೆಸಿ ಜಮೀನುಗಳ ವಿಭಾಗಗಳನ್ನು ರಿಜಿಸ್ಟರ್ ಮಾಡಿಸಲು ಗೌರಿಬಿದನೂರು ತಾಲೂಕು ಕಚೇರಿಗೆ ಹೋಗಿದ್ದಾರೆ. ಅಲ್ಲಿ ಸೂಕ್ತ ಪರಿಹಾರ ಸಿಗದ ಹಿನ್ನಲೆ ಅಣ್ಣ-ತಮ್ಮಂದಿರಿಗೆ ಮಾತಿಗೆ ಮಾತು ಬೆಳೆದಿದೆ.

    ಈ ಸಂದರ್ಭ ಹಿರಿಯ ಅಣ್ಣ ಜಗನ್ನಾಥ್ ತಾಲೂಕು ಕಚೇರಿ ಆವರಣದಲ್ಲೇ ತನ್ನಷ್ಟಕ್ಕೆ ತಾನೇ ಚಾಕುವಿನಿಂದ ತನ್ನ ಹೊಟ್ಟೆಗೆ ತಿವಿದುಕೊಂಡಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ. ಇನ್ನು ಚಾಕುವಿನಿಂದ ತಿವಿದುಕೊಂಡ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಹೊಟ್ಟೆಯ ನಾಲ್ಕೈದು ಭಾಗಗಳಲ್ಲಿ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

    ಇದನ್ನೂ ಓದಿರಿ: ಮುದ್ದಾದ ಗಂಡು ಮಗುವನ್ನು ಢಾಬಾದಲ್ಲಿ ಬಿಟ್ಟುಹೋದ ಮಹಿಳೆ; ಅಸಲಿ ತಾಯಿ ಯಾರು?

    ಕಬ್ಜ ಚಿತ್ರತಂಡಕ್ಕೆ ಸುದೀಪ್​ ಎಂಟ್ರಿ; ಮತ್ತೆ ಒಂದಾದ ಮುಕುಂದ ಮುರಾರಿ

    ತಂದೆಗೆ ನೆರವಾಗಲು ಆಟೋ ಚಾಲಕಿಯಾದ ಯುವತಿ: ಸೇನೆಗೆ ಸೇರುವುದೇ ಈಕೆಯ ಗುರಿ!

    ಚಿಕ್ಕಪ್ಪಾ… ಎನ್ನುತ್ತಲೇ ಪ್ರೀತಿಯಿಂದ ತಬ್ಬಿಕೊಳ್ಳಲು ಕೈಚಾಚಿದ 5 ವರ್ಷದ ಮಗಳ ಕತ್ತನ್ನೇ ಕೊಯ್ದುಬಿಟ್ಟ! ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts