ನವದೆಹಲಿ: ದೆಹಲಿಯಲ್ಲಿ ರೈತ ಹೋರಾಟದ ಕಿಚ್ಚು ಹೆಚ್ಚಾಗಿದ್ದು, ಇಂದು ನಡೆಯಬೇಕಿದ್ದ ಆರನೇ ಸುತ್ತಿನ ಮಾತುಕತೆಯೂ ರದ್ದಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಚಳಿಯೂ ಹೆಚ್ಚಾಗಿರುವುದರಿಂದಾಗಿ ಇಂದು 32 ವರ್ಷದ ರೈತನೊಬ್ಬ ಕೊನೆಯುಸಿರೆಳೆದಿದ್ದಾನೆ.
ಇದನ್ನೂ ಓದಿ: ಸ್ಕೂಲ್ ಬ್ಯಾಗ್ ತೂಕ ಮತ್ತಷ್ಟು ಇಳಿಕೆ, ಹೋಂ ವರ್ಕ್ಗೂ ಬಿತ್ತು ಕತ್ತರಿ! ಈ ಕ್ಲಾಸಿನ ಮಕ್ಕಳಿಗೆ ಹೋಂ ವರ್ಕ್ ಇಲ್ಲವೇ ಇಲ್ಲ!
ಹರಿಯಾಣ ಮೂಲದ ಅಜಯ್ ಮೋರ್ ಮೃತನಾದ ದುರ್ದೈವಿ. ಈತ ಕಳೆದ 10 ದಿನಗಳಿಂದ ಹೋರಾಟದಲ್ಲಿ ಭಾಗವಹಿಸಿದ್ದ. ಚಳಿ ಹೆಚ್ಚಿದ್ದಿದ್ದರಿಂದ ಅದನ್ನು ತಾಳಲಾರರೆ ರೈತ ಮಂಗಳವಾರ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಅಜಯ್ಗೆ ವಯಸ್ಸಾದ ತಂದೆ ತಾಯಿಯಿದ್ದಾರೆ. ಮೂರು ಚಿಕ್ಕ ಮಕ್ಕಳಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ. ರೈತ ಹೋರಾಟ ಆರಂಭವಾದ 14 ದಿನಗಳಲ್ಲಿ ಐವರು ರೈತರು ಸಾವಿಗೀಡಾಗಿರುವುದಾಗಿ ಹೇಳಲಾಗಿದೆ.(ಏಜೆನ್ಸೀಸ್)
ಮದುವೆಗೆ ಮೂರು ದಿನವಿದ್ದಾಗ ಮರ್ಮಾಂಗವೇ ಕಟ್! 1 ಲಕ್ಷಕ್ಕಾಗಿ ಜೀವನವನ್ನೇ ಹಾಳು ಮಾಡಿಕೊಂಡ ಯುವಕ
ನಟಿ ದಿವ್ಯಾ ಸಾವಿಗೂ ಮುನ್ನ ಬರೆದಿಟ್ಟಿದ್ದ ಪತ್ರದಿಂದ ಬಯಲಾಯ್ತು ಪತಿಯ ನಿಜ ಬಣ್ಣ! ಅಪ್ತ ಸ್ನೇಹಿತೆ ಬಿಚ್ಚಿಟ್ಟ ರಹಸ್ಯ