More

    ಕಾಡುಪ್ರಾಣಿಗಳ ಹಾವಳಿ ನಿಯಂತ್ರಿಸದಿದ್ದರೆ ರಸ್ತೆ ಸಂಚಾರ ತಡೆ

    ಹನೂರು: ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಹಾವಳಿ ಸಮಸ್ಯೆ ಬಗೆಹರಿಸದಿದ್ದರೆ ಫೆ.5ರಂದು ಜಿಲ್ಲೆಯ ಎಲ್ಲ ತಾಲೂಕುಗಳಲ್ಲೂ ಏಕಕಾಲದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರಸ್ತೆ ಸಂಚಾರ ತಡೆ ನಡೆಸುವುದಾಗಿ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಎಚ್ಚರಿಸಿದರು.

    ಗುರುವಾರ ಲೊಕ್ಕನಹಳ್ಳಿಯ ಅರಣ್ಯ ಇಲಾಖೆ ಕಚೇರಿಗೆ ತೆರಳಿದ್ದ ವೇಳೆ ಅರಣ್ಯಾಧಿಕಾರಿಗಳು ಇಲ್ಲದ ಕಾರಣ ಆಕ್ರೋಶ ವ್ಯಕ್ತಪಡಿಸಿದ ಅವರು, ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಒಡೆಯರಪಾಳ್ಯ, ಪಿ.ಜಿ ಪಾಳ್ಯ, ಬೋರೆದೊಡ್ಡಿ, ಬೂದಿಪಡಗ, ಆಂಡಿಪಾಳ್ಯ ಹಾಗೂ ಈ ಭಾಗದ ಇನ್ನಿತರ ಗ್ರಾಮಗಳಲ್ಲಿ ಕಾಡುಪ್ರಾಣಿಗಳು ಜಮೀನಿಗೆ ನುಗ್ಗಿ ಫಸಲನ್ನು ಹಾಳು ಮಾಡುತ್ತಿವೆ. ಆದರೆ ಸರ್ಕಾರ ಬೆಳೆ ನಷ್ಟಕ್ಕೆ ಅನುಗುಣವಾಗಿ ಪರಿಹಾರ ನೀಡುತ್ತಿಲ್ಲ. ಇದರಿಂದ ರೈತರು ಸಂಕಷ್ಟ ಅನುಭವಿಸುವಂತಾಗಿದೆ ಎಂದು ದೂರಿದರು.

    ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ವಾರದ ಹಿಂದೆ ಮಹದೇಶ್ವರ ಬೆಟ್ಟದಿಂದ ಚಾಮರಾಜನಗರಕ್ಕೆ ಕೈಗೊಂಡಿದ್ದ ಪಾದಯಾತ್ರೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು, ‘ಸಮಸ್ಯೆಗಳಿದ್ದರೆ ನಮ್ಮ ಗಮನಕ್ಕೆ ತನ್ನಿ. ಬಗೆಹರಿಸಲಾಗುವುದು. ಯಾವುದೇ ಕಾರಣಕ್ಕೂ ಪ್ರತಿಭಟನೆ ಬೇಡ’ ಎಂದು ತಿಳಿಸಿದ್ದರು. ಹೀಗಾಗಿ ಫೆ.5ರಂದು ಲೊಕ್ಕನಹಳ್ಳಿ ಸಫಾರಿ ಕೇಂದ್ರದ ಮುಂಭಾಗ ರೈತರು ಆಗಮಿಸಲಿದ್ದಾರೆ. ಈ ವೇಳೆ ಬಿಆರ್‌ಟಿ ಹಾಗೂ ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಡಿಸಿಎಫ್‌ಗಳು ಆಗಮಿಸಿ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದಲ್ಲಿ ರಸ್ತೆ ಸಂಚಾರ ತಡೆ ನಡೆಸಲಾಗುವುದು ಎಂದು ತಿಳಿಸಿದರು. ರೈತ ಮುಖಂಡರಾದ ಸೋಮಣ್ಣ, ಕುಮಾರ್, ಮನೋಹರ್, ನವೀನ್, ಪ್ರಕಾಶ್, ರಾಜಶೇಖರ್, ಮಾದೇವ ಇನ್ನಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts