ಬೆಂಗಳೂರು: ಕರೊನಾ ಭೀತಿ ನಡುವೆಯೂ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇನ ಆಂಭವಾಗಿದೆ. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ 30ಕ್ಕೂ ಹೆಚ್ಚು ಸಂಘಟನೆಗಳು ಸಿಡಿದೆದ್ದು ಬೀದಿಗಳಿದು ಪ್ರತಿಭಟಿಸುತ್ತಿವೆ.
ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ಸುಗ್ರೀವಾಜ್ಞೆ, ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಕೋಡಿಹಳ್ಳಿ ಚಂದ್ರಶೇಖರ್ ಮತ್ತು ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ. ಮೆಜೆಸ್ಟಿಕ್ ಬಳಿಯ ರೈಲ್ವೆ ನಿಲ್ದಾಣದಿಂದ ಹೊರಟ ಬೃಹತ್ ಪ್ರತಿಭಟನಾ ಮೆರವಣಿಗೆಗೆ ರಾಜ್ಯದ 32 ಸಂಘಟನೆಗಳು ಸಾಥ್ ನೀಡಿವೆ. ಇದನ್ನೂ ಓದಿರಿ ವಿಧಾನಮಂಡಲ ಕಲಾಪ ಆರಂಭ, 60ಕ್ಕೂ ಹೆಚ್ಚು ಶಾಸಕರು ಗೈರು?
ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ಸುಗ್ರೀವಾಜ್ಞೆ, ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಬೆಂಗಳೂರಿನಲ್ಲಿ ಮಳೆಯನ್ನೂ ಲೆಕ್ಕಿಸದೆ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ಅನ್ನದಾತರು, ಈ ಮೂರು ಕಾಯ್ದೆಯನ್ನೂ ಕೈಬಿಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ರೈತರ ಹೋರಾಟಕ್ಕೆ ಸರ್ಕಾರ ಮಣಿಯಬೇಕು. ಒಂದು ವೇಳೆ ರೈತರಿಗೆ ಮಾರಕವಾಗಿರುವ ಬಿಲ್ಗಳನ್ನು ಮಂಡಿಸದ್ದೇ ಆದಲ್ಲಿ ಕಾನೂನು ಭಂಗ, ಜೈಲ್ ಭರೋ ಚಳವಳಿಯನ್ನೂ ಮಾಡಲು ಸಿದ್ಧರಿದ್ದೇವೆ ಎಂದು ರೈತ ಮುಖಂಡರು ಎಚ್ಚರಿಸಿದರು.
ಮಧ್ಯಾಹ್ನ 12.50ರ ಸುಮಾರಿಗೆ ರೈತರ ಪ್ರತಿಭಟನಾ ರ್ಯಾಲಿ ರೇಸ್ಕೊರ್ಸ್ ರಸ್ತೆ ದಾಟಿತ್ತು. ಮೆಜೆಸ್ಟಿಕ್, ಫ್ರೀಡಂ ಪಾರ್ಕ್, ಆನಂದರಾವ್ ಸರ್ಕರ್, ರೇಸ್ಕೋರ್ಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಜನ ಜಮಾಯಿಸಿದ್ದರಿಂದ ಎಲ್ಲೆಡೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.