ಕೆಸ್ತೂರು ಗ್ರಾಪಂ ಕಚೇರಿ ಮುಂದೆ ಎತ್ತಿನಗಾಡಿ ನಿಲ್ಲಿಸಿ ರೈತನ ಪ್ರತಿಭಟನೆ

blank

ಮದ್ದೂರು: ಹೊಸದಾಗಿ ನಿರ್ಮಾಣ ಮಾಡಿರುವ ಮನೆಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕುಡಿಯುವ ನೀರಿನ ಸಂಪರ್ಕ ಕಲ್ಲಿಸಿಲ್ಲ ಎಂದು ಆರೋಪಿಸಿ ರೈತನೊಬ್ಬ ಕೆಸ್ತೂರು ಗ್ರಾಪಂ ಕಚೇರಿ ಎದುರು ಎತ್ತಿನಗಾಡಿ ಹಾಗೂ ಎತ್ತುಗಳನ್ನು ತಂದು ಸೋಮವಾರ ಪ್ರತಿಭಟನೆ ನಡೆಸಿದರು.

ಕೆಸ್ತೂರು ಗ್ರಾಪಂ ವ್ಯಾಪ್ತಿಯ ಅಡಗನಹಳ್ಳಿ ಗ್ರಾಮದ ರೈತ ಸತೀಶ್ ಮಾತನಾಡಿ, ಅಡಗನಹಳ್ಳಿ ಗ್ರಾಮದಲ್ಲಿ ನಾನು ಹೊಸದಾಗಿ ನಿರ್ಮಿಸಿದ ಮನೆಗೆ ಕುಡಿಸುುವ ನೀರಿನ ಸೌಲಭ್ಯ ಕಲ್ಪಿಸುವಂತೆ ಪಿಡಿಒಗೆ ಹಲವಾರು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

ಶೀಘ್ರವಾಗಿ ನನ್ನ ಮನೆಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸದೆ ಹೋದರೆ ಪಂಚಾಯಿತಿ ಮುಂದೆ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಇನ್ನೆರಡು ದಿನದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದ ನಂತರ ಪ್ರತಿಭಟನೆ ಕೈ ಬಿಟ್ಟರು.

Share This Article

ವೆಜ್​ ಪ್ರಿಯರಿಗಾಗಿ ಸ್ಟ್ರೀಟ್ ಸ್ಟೈಲ್ ಮೊಮೊಸ್; ಮನೆಯಲ್ಲೆ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ Recipe

ಸ್ಟ್ರೀಟ್​ ಫುಡ್​ ಯಾರಿಗೆ ಇಷ್ಟ ಇರುವುದಿಲ್ಲ ಹೇಳಿ, ಸಂಜೆಯಾದರೆ ಸಾಕು ಸ್ಟ್ರೀಟ್ ಫುಡ್ ತಿನ್ನಬೇಕು ಎನ್ನಿಸುತ್ತದೆ.…

ಹೀಲ್ಸ್ ಧರಿಸುವುದು ಎಷ್ಟು ಅಪಾಯಕಾರಿ ಗೊತ್ತೆ?; ತಪ್ಪದೆ ಈ ಮಾಹಿತಿ ತಿಳಿದುಕೊಳ್ಳಿ | Health Tips

ಹೈಹೀಲ್ಸ್​​ ಬೂಟುಗಳನ್ನು ಧರಿಸುವುದು ಪರಿಪೂರ್ಣ ಭಂಗಿಯನ್ನು ನೀಡುತ್ತದೆ, ಎತ್ತರವಾಗಿ ಕಾಣುತ್ತದೆ ಮತ್ತು ಸ್ಟೈಲಿಶ್ ಆಗಿ ಕಾಣುತ್ತದೆ.…

ಶೀತದಲ್ಲಿಯೂ ಉತ್ತಮ ನಿದ್ರೆಗೆ ಈ ಟ್ರಿಕ್ಸ್​ ಫಾಲೋ ಮಾಡಿ; ನಿಮಗಾಗಿ ಹೆಲ್ತಿ ಟಿಪ್ಸ್​​ | Health Tips

ಕೆಲವರಿಗೆ ಚಳಿಗಾಲದಲ್ಲಿ ಹೆಚ್ಚು ನಿದ್ದೆ ಬಂದರೆ ಇನ್ನು ಕೆಲವರು ಕಣ್ಣುಗಳಿಂದ ನಿದ್ದೆ ಕಳೆದುಕೊಳ್ಳುತ್ತಾರೆ. ನಿದ್ರೆಯ ಮಾದರಿಯಲ್ಲಿ…