More

    ಪಲ್ಟಿಯಾದ ಕಾರು, ತಂದೆ-ಮಗ ಸ್ಥಳದಲ್ಲೇ ಸಾವು..

    ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಿನ್ನೆಯಷ್ಟೇ ಒಂದು ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಬಿಜೆಪಿ ಮುಖಂಡರೊಬ್ಬರ ಕಾಲು ತುಂಡಾಗಿದ್ದರೆ, ಇನ್ನು ನಾಲ್ವರು ಗಾಯಗೊಂಡಿದ್ದು, ಆ ಪೈಕಿ ಇಬ್ಬರ ಪರಿಸ್ಥಿತಿ ಗಂಭೀರವಾಗಿತ್ತು. ಇಂದು ಕಲಬುರಗಿ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ತಂದೆ-ಮಗ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

    ಇದನ್ನೂ ಓದಿ: ಭೀಕರ ಅಪಘಾತ, ಬಿಜೆಪಿ ಮುಖಂಡನ ಕಾಲು ತುಂಡು: ಇನ್ನಿಬ್ಬರ ಪರಿಸ್ಥಿತಿ ಚಿಂತಾಜನಕ, ಒಟ್ಟು ಐವರಿಗೆ ಗಾಯ..

    ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಖಾನಾಪುರ ಗ್ರಾಮದ ಬಳಿ ಇಂದು ಈ ಭೀಕರ ಅಪಘಾತ ಸಂಭವಿಸಿದೆ. ಸ್ವಾಮಿ ಗಾಯಕವಾಡ (30), ಬಾಬು ಗಾಯಕವಾಡ (55) ಸಾವಿಗೀಡಾದವರು. ಮಹಾರಾಷ್ಟ್ರದ ಅಕ್ಕಲಕೋಟ್ ನಿವಾಸಿಗಳಾಗಿದ್ದ ಇವರು, ಅಳಂದದಿಂದ ಅಕ್ಕಲಕೋಟ್​ಗೆ ಹೋಗುವಾಗ ಅಪಘಾತ ಸಂಭವಿಸಿದೆ. ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಲ್ಟಿಯಾದ ಕಾರು, ತಂದೆ-ಮಗ ಸ್ಥಳದಲ್ಲೇ ಸಾವು..

    ಮಸೀದಿಗಳಲ್ಲಿನ ಮೈಕ್​ ವಿರುದ್ಧ ಶ್ರೀರಾಮಸೇನೆ ಗುಡುಗು; ನಿರ್ಬಂಧಿಸದಿದ್ದರೆ ದೇವಸ್ಥಾನಗಳಲ್ಲಿ ಮೈಕ್​ ಹಾಕಿ ಭಜನೆ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts