ಮಗನ ಕಾಟ ತಾಳಲಾಗದೇ ಆತನನ್ನು ಬರ್ಬರವಾಗಿ ಕೊಲೆ ಮಾಡಿದ ತಂದೆ!

ಬೆಳಗಾವಿ: ಮಗನ ಕಾಟವನ್ನು ತಾಳಲಾಗದೆ ತಂದೆಯೊಬ್ಬ ಆತನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ತಂದೆ ಮಾರಕಾಸ್ತ್ರದಿಂದ ಬೀಸಿದ ಹೊಡೆತಕ್ಕೆ ಮಗ ಸ್ಥಳದಲ್ಲೇ ಸಾವಿಗೀಡಾಗಿದ್ದು, ಶವ ರಕ್ತದ ಮಡುವಿನಲ್ಲಿ ಬಿದ್ದಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಬಿಕೆ ಗ್ರಾಮದಲ್ಲಿ ಈ ಬರ್ಬರ ಕೊಲೆ ನಡೆದಿದೆ. ಭರತೇಶ ಜಿನ್ನಪ್ಪಾ ಕಾಂಜಿ (30) ಕೊಲೆಯಾದವ. ಈತನ ತಂದೆ ಜಿನ್ನಪ್ಪಾ ಕಾಂಜಿ ಕೊಲೆ ಆರೋಪಿ. ಪ್ರಾಥಮಿಕ ಮೂಲಗಳ ಪ್ರಕಾರ ಮಗನ ಕಾಟ ತಾಳಲಾಗದೆ ತಂದೆ ಕೊಲೆ ಮಾಡಿದ್ದಾನೆ ಎಂಬುದು ತಿಳಿದುಬಂದಿದೆ. … Continue reading ಮಗನ ಕಾಟ ತಾಳಲಾಗದೇ ಆತನನ್ನು ಬರ್ಬರವಾಗಿ ಕೊಲೆ ಮಾಡಿದ ತಂದೆ!