ಬೆಂಗಳೂರು: ತಂದೆಯೋರ್ವ ಮೂವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮೈಕೋ ಲೇಔಟ್ನ ರಮಣಿಶ್ರೀ ಎಂಕ್ಲೇವ್ ಬಳಿ ನಡೆದಿದೆ.
ರಮಣಿಶ್ರೀ ಎಂಕ್ಲೇವ್ನಲ್ಲಿ ಸೆಕ್ಯುರಿಟಿ ಗಾರ್ಡ್ ಅಗಿ ಕೆಲಸ ಮಾಡ್ತಿದ್ದ ಜನಕರಾಜ್ ಬಿಸ್ತಾ (32) ಮಕ್ಕಳಾದ ಸರಸ್ವತಿ (14 ), ಹೇಮಂತಿ (9) ಮತ್ತು ರಾಜಕುಮಾರ್ (3)ರನ್ನ ಕೊಂದು ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇದನ್ನೂ ಓದಿ: ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ: 3 ವಾರಗಳಲ್ಲಿ ವೇಳಾಪಟ್ಟಿ ಪ್ರಕಟಿಸಲು ಸೂಚನೆ
ನಾಲ್ವರ ಮೃತ ದೇಹಗಳನ್ನು ವಿಕ್ಟೋರಿಯಾ ಅಸ್ಪತ್ರೆಗೆ ರವಾನೆ ಮಾಡಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. (ದಿಗ್ವಿಜಯ ನ್ಯೂಸ್)
ದೀಪಾವಳಿ ಹಬ್ಬಕ್ಕೆಂದು ರೈಲನ್ನೇರಿ ಊರಿಗೆ ಬರ್ತಿದ್ದ ಯುವತಿಗಾಗಿ ಮಾರ್ಗ ಮಧ್ಯೆಯೇ ಕಾದಿದ್ದ ಜವರಾಯ!