ಕೊಳ್ಳೇಗಾಲ: ಸೊಸೆಯನ್ನು ಚಾಕುವಿನಿಂದ ಇರಿದು ಕೊಂದ ಮಾವ, ಬಳಿಕ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದಲ್ಲಿ ಸಂಭವಿಸಿದೆ.
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಪಟ್ಟಣದ ಆದರ್ಶನ ನಗರದ ನಿವಾಸಿ ಸುಮಿತ್ರ(35) ಕೊಲೆಯಾದವರು. ಈಕೆಯನ್ನು ಮಾವ ಚಿಕ್ಕುಚ್ಚಯ್ಯ(52) ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿರಿ ಜಾರಕಿಹೊಳಿ ಸಿಡಿ ಕೇಸ್ನಲ್ಲಿ ಕಾಂಗ್ರೆಸ್ ಶಾಸಕಿ ಕೈವಾಡ! ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು?
ಸುಮಿತ್ರಾಳ ಗಂಡ ಸುರೇಂದ್ರ ಅವರು ತಾಲೂಕು ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರನಾಗಿ ಕೆಲಸ ಮಾಡುತ್ತಿದ್ದಾರೆ. ಶನಿವಾರ ಮಧ್ಯಾಹ್ನ ಊಟಕ್ಕೆಂದು ಸುರೇಂದ್ರ ಮನೆಗೆ ಬಂದಾಗ ಕೊಲೆ-ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಸುರೇಂದ್ರ ಬೆಳಗ್ಗೆ ಕೆಲಸಕ್ಕೆಂದು ಹೊರ ಹೋದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.
ಇನ್ನು ಆತ್ಮಹತ್ಯೆ ಮಾಡಿಕೊಂಡ ಚಿಕ್ಕುಚ್ಚಯ್ಯ ಸಾವಿಗೂ ಡೆತ್ನೋಟು ಬರೆದಿದ್ದಾನೆ ಎನ್ನಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮುನ್ನ ಮೂರ್ನಾಲ್ಕು ಪುಟಗಳುಲ್ಲ ಡೆತ್ನೋಟ್ನಲ್ಲಿ ಚಿಕ್ಕುಚ್ಚಯ್ಯ, ಮಗ-ಸೊಸೆ ಮದುವೆ ಮಾಡಿದ್ದು ಹೇಗೆ ಎಂಬುದರ ಮಾಹಿತಿ ಜತೆಗೆ ಸಾವಿನ ರಹಸ್ಯವನ್ನೂ ದಾಖಲಿಸಿದ್ದಾರೆ ಎನ್ನಲಾಗಿದೆ.
ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣದ ಸಂತ್ರಸ್ತ ಯುವತಿಯ ಎಕ್ಸ್ಕ್ಲೂಸಿವ್ ಮಾಹಿತಿ ಸ್ಫೋಟ
ಸೆಕ್ಸ್ ವಿಡಿಯೋದಲ್ಲಿ ರಮೇಶ್ ಜಾರಕಿಹೊಳಿಯ ಮಚ್ಚೆ ಹುಡುಕಿದ ಮಹೇಶ್ ಕುಮಟಳ್ಳಿ!
‘