ಮಗಳು ಲವ್ ಮಾಡಿದ್ದಕ್ಕೆ ಮರ್ಯಾದೆಗೆ ಅಂಜಿ ಆಕೆ ಜೀವವನ್ನೇ ತೆಗೆದ ತಂದೆ..Bidar

blank

ಬೀದರ್: ( Bidar ) ಮಗಳು ಲವ್ ಮಾಡಿದ್ದಕ್ಕೆ ಮರ್ಯಾದೆಗೆ ಅಂಜಿ ಆಕೆಯ ಜೀವವನ್ನೇ ಪಾಪಿ ತಂದೆಯೊಬ್ಬ ತೆಗೆದಿದ್ದಾನೆ. ಜಿಲ್ಲೆಯ ಔರಾದ್ ತಾಲೂಕಿನ ಬರಗೇನ್ ತಾಂಡಾದಲ್ಲಿ ಕೃತ್ಯ ನಡೆದಿದೆ.

ಮೋನಿಕಾ ಮೋತಿರಾಮ ಜಾಧವ್ (18) ಕೊಲೆಯಾದ ದುರ್ದೈವಿ. ಪ್ರೀತಿ ಮಾಡಿದ್ದಕ್ಕೆ ರೊಚ್ಚಿಗೆದ್ದು ತಂದೆಯೇ ದೊಣ್ಣೆಯಿಂದ ಹೊಡೆದು ಮಗಳನ್ನೇ ಬರ್ಬರ ಹತ್ಯೆ ಮಾಡಿ  ಪರಾರಿಯಾಗಿದ್ದಾನೆ.

ನಡೆದಿದ್ದೇನು?: 

ಪ್ರೀತಿ-ಪ್ರೇಮದಿಂದ ದೂರವಿರುವಂತೆ ಮಗಳಿಗೆ ತಂದೆ ತಿಳುವಳಿಕೆ ಹೇಳಿದ್ದಾನೆ. ಅಲ್ಲದೇ ನಿನಗೆ ಒಳ್ಳೆಯ ಹುಡುಗನನ್ನ ನೋಡಿ ಮದುವೆ ಮಾಡುತ್ತೇನೆ ಎಂದಿದ್ದಾನೆ. ಈ ವೇಳೆ ತಂದೆಯ ಎದುರು ಮಗಳು ಪ್ರೀತಿ ವಿಷಯ ಪ್ರಸ್ತಾಪಿಸಿದ್ದಲ್ಲದೇ ಅವನನ್ನೇ ಮದುವೆ ಆಗುತ್ತೇನೆ ಎಂದು ಗಲಾಟೆ ಮಾಡಿದ್ದಾಳೆ.

ಬುದ್ಧಿಮಾತು ಹೇಳಿದ್ರೂ ಕೇಳದ ಹಿನ್ನೆಲೆ ಕೋಪಗೊಂಡು ತಂದೆ ಮಗಳನ್ನು  ಹೊಡೆದಿದ್ದಾನೆ.ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಗಳ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೊನಿಕಾ ಮೃತಪಟ್ಟಿದ್ದಾರೆ. ಮಗಳನ್ನೇ ಬರ್ಬರ ಹತ್ಯೆ ಮಾಡಿ  ಪರಾರಿಯಾಗಿದ್ದಾನೆ.

ಈ ಕುರಿತು ಸಂತಪೂರ ಪೊಲೀಸ್ ಠಾಣೆಯಲ್ಲಿ ಮೃತ ಯುವತಿಯ ತಾಯಿ ಭಾಗುಬಾಯಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಬಲೆ ಬಿಸಿದ್ದಾರೆ.

ಅರವಿಂದ್​​ ಕೇಜ್ರಿವಾಲ್​ಗೆ ಸೋಲು! ಎಎಪಿ ವರಿಷ್ಠಗೆ ಭಾರೀ ಮುಖಭಂಗ..ಕೇಜ್ರಿವಾಲ್​ಗೆ ಬಿಗ್ ಶಾಕ್ Arvind Kejriwal

 

TAGGED:
Share This Article

ಸಂಜೆ ಉಪ್ಪನ್ನು ದಾನ ಮಾಡುವುದು ಒಳ್ಳೆಯದಲ್ಲ! ಮನೆಯಲ್ಲಿ ಎದುರಾಗುತ್ತದೆ ಹಣದ ಸಮಸ್ಯೆ..salt

salt : ಉಪ್ಪು ಅಡುಗೆಯಲ್ಲಿ ಕೇವಲ ರುಚಿ ಹೆಚ್ಚಿಸುವ ವಸ್ತುವಲ್ಲ. ವಾಸ್ತು ಶಾಸ್ತ್ರದ ಪ್ರಕಾರ, ಇದು ಮನೆಯಲ್ಲಿ…

ನವವಿವಾಹಿತರಿಗೆ ಈ ಉಡುಗೊರೆಗಳನ್ನು ಎಂದಿಗೂ ನೀಡಬೇಡಿ! ಜೀವನ ಹಾಳಾಗುತ್ತದೆ… gifts

gifts: ಹೊಸದಾಗಿ ಮದುವೆಯಾದ ಹೆಣ್ಣುಮಗಳಿಗೆ ಉಡುಗೊರೆಗಳನ್ನು ನೀಡುವುದು ಸಾಮಾನ್ಯ.  ತಾಯಿಯ ಮನೆಯಿಂದ ಮಗಳಿಗೆ ಕೆಲವು ರೀತಿಯ…

ಈ ಸುಡುವ ಬಿಸಿಲಿನಲ್ಲಿ ಐಸ್ ಕ್ರೀಮ್ ತಿನ್ನುವುದರಿಂದ ನಿಜವಾಗಿಯೂ ದೇಹ ತಂಪಾಗುತ್ತದೆಯೇ? ice cream

ice cream: ನಾವು ಒಂದು ಚಮಚ ಐಸ್ ಕ್ರೀಮ್ ಅನ್ನು ಬಾಯಿಯಲ್ಲಿ ಇಟ್ಟ ತಕ್ಷಣ ತಂಪನ್ನು…