ಕಲಬುರಗಿ: ಕುಡಿದ ಮತ್ತಿನಲ್ಲಿ ತಂದೆಯೇ ಮಕ್ಕಳಿಗೆ ವಿಷ ಕುಡಿಸಿ ಕೊಲೆ ಮಾಡಿರುವ ಘಟನೆ ಚಿಂಚೋಳಿ ತಾಲೂಕಿನ ಭೈರಂಪಳ್ಳಿ ತಾಂಡಾದಲ್ಲಿ ಶುಕ್ರವಾರ ನಸುಕಿನ ಜಾವ ನಡೆದಿದೆ.
ಮೃತರನ್ನು ರೋಹಿತಾ ಸಂಜೀವ್ (4), ಪರ್ವಿನ್ ಸಂಜೀವ್ (3) ಎಂದು ಗುರುತಿಸಲಾಗಿದೆ. ಕುಡಿದ ಮತ್ತಿನಲ್ಲಿದ್ದ ಸಂಜೀವ್ ಮಕ್ಕಳಿಬ್ಬರನ್ನು ಜಮೀನಿಗೆ ಕರೆದ್ಯೊಯ್ದು ವಿಷ ಕುಡಿಸಿ ಕೊಲೆ ಮಾಡಿದ್ದಾನೆ. ನಂತರ ತಾನು ವಿಷ ಕುಡಿದು ಆತ್ಮಹತ್ಯೆ ನಾಟಕವಾಡಿದ್ದಾನೆ.
ಪತ್ನಿ ಶೀಲ ಶಂಕಿಸಿ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದ್ದು, ಮಿರಿಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)