More

    ಮಗನ ಕಣ್ಣೆದುರೇ ಸಿಡಿಲೆರಗಿ ಸ್ಥಳದಲ್ಲೇ ಮೃತಪಟ್ಟ ತಂದೆ: ಮಳೆಯಲ್ಲೇ ಹೋದರೆ ಅಪಾಯ ಎಂದು ಮರದ ಕೆಳಗೆ ನಿಂತಾಗ ಅವಘಡ

    ಬೆಂಗಳೂರು: ನೈಸ್ ರಸ್ತೆಯಲ್ಲಿ ಮಳೆ ಜೋರಾಗಿ ಸುರಿದ ಹಿನ್ನೆಲೆಯಲ್ಲಿ ಮರದ ಕೆಳಗೆ ನಿಂತಿದ್ದ ತರಕಾರಿ ವ್ಯಾಪಾರಿಗೆ ಸಿಡಿಲು ಬಡಿದು ಮೃತಪಟ್ಟರೆ, ಆತನ ಪುತ್ರ ಗಂಭೀರವಾಗಿ ಗಾಯಗೊಂಡಿದ್ದಾನೆ.

    ತುಮಕೂರು ಮೂಲದ ಟಿ.ದಾಸರಹಳ್ಳಿಯ ನಿವಾಸಿ ತರಕಾರಿ ವ್ಯಾಪಾರಿ ತಿಪ್ಪೇಸ್ವಾಮಿ (46) ಮೃತಪಟ್ಟವರು. ಇವರ ಪುತ್ರ ಚಿದಾನಂದ್ (22) ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

    ಇದನ್ನೂ ಓದಿ: ಮತಾಂತರವಾಗಿದ್ದವರ ಘರ್​ ವಾಪಸಿ; ಶಾಸಕ ಗೂಳಿಹಟ್ಟಿ ಶೇಖರ್ ನೇತೃತ್ವದಲ್ಲಿ ಶಿಲುಬೆ ತೆಗೆದಿಟ್ಟು ಕಂಕಣ ಕಟ್ಟಿಕೊಂಡು ವಾಪಸ್

    ತಂದೆ-ಮಗ ಇಬ್ಬರೂ ಭಾನುವಾರ ಸಂಜೆ ತಮ್ಮ ಮನೆಯಿಂದ ಚಿಕ್ಕಗೊಲ್ಲರಹಟ್ಟಿಯಲ್ಲಿರುವ ಸಂಬಂಧಿಕರ ಮನೆಗೆ ಹೋಂಡಾ ಆಕ್ಟಿವಾ ಸ್ಕೂಟರ್‌ನಲ್ಲಿ ಹೋಗುತ್ತಿದ್ದರು. ಮಾರ್ಗ ಮಧ್ಯೆ ಬ್ಯಾಡರಹಳ್ಳಿ ಬಳಿಯ ನೈಸ್ ರಸ್ತೆಯಲ್ಲಿ ಹೋಗುತ್ತಿದ್ದಾಗ ಜೋರಾಗಿ ಮಳೆ ಸುರಿದ ಕಾರಣ ರಸ್ತೆ ಬದಿ ಸ್ಕೂಟರ್ ನಿಲ್ಲಿಸಿ ಮರದ ಕೆಳಗೆ ಆಶ್ರಯ ಪಡೆದಿದ್ದರು.

    ಇದನ್ನೂ ಓದಿ: ಆಮ್​ ಆದ್ಮಿ ಪಾರ್ಟಿಗೆ ವಕೀಲ್​ ಸಾಬ್​; ಲಾಯರ್ ಕೆ.ಎನ್​. ಜಗದೀಶ್​ ನಾಳೆ ಆಪ್​ಗೆ ಸೇರ್ಪಡೆ

    ಆ ವೇಳೆ ಇಬ್ಬರಿಗೂ ಸಿಡಿಲು ಬಡಿದಿದೆ. ಪರಿಣಾಮ ತಿಪ್ಪೇಸ್ವಾಮಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅದೇ ರಸ್ತೆಯಲ್ಲಿ ಗಸ್ತು ತಿರುಗುತ್ತಿದ್ದ ಬ್ಯಾಡರಹಳ್ಳಿ ಠಾಣೆಯ ಹೊಯ್ಸಳ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡ ಚಿದಾನಂದ್‌ನನ್ನು ಗಮನಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಓದೋಕೆ ಆಸಕ್ತಿ ಇಲ್ಲ, ಆಡೋಕೆ ಇಷ್ಟ, ಅದ್ರಲ್ಲೇ ದುಡಿತೀವಿ ಅಂತ ಮನೆ ಬಿಟ್ಟು ಹೋದ್ರು ಮೂವರು ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts