ಬೆಂಗಳೂರು: ಕ್ಷುಲ್ಲಕ ವಿಚಾರವಾಗಿ ಶುರುವಾದ ಗಲಾಟೆಯಲ್ಲಿ ತಂದೆಯೇ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಕಾಮಾಕ್ಷಿಪಾಳ್ಯದ ಕೃಷ್ಣ ಕನ್ವೆನ್ಷನ್ ಹಾಲ್ ಬಳಿ ನಡೆದಿದೆ.
ಆರೋಪಿ ತಂದೆ ಗುರುರಾಜ್ ಹಾಗೂ ಮಗ ಸಂತೋಷ್ ಕೊಲೆ ದುರ್ದೈವಿ. ಇಬ್ಬರೂ ಆರ್ಟಿಓ ದಲ್ಲಿ ಏಜೆಂಟರಾಗಿ ಕೆಲಸ ಮಾಡುತ್ತಿದ್ದರು. ಜೊತೆಗೆ ತಂದೆ ಗುರುರಾಜ್ ಡ್ರೈವಿಂಗ್ ಸ್ಕೂಲ್ ನಡೆಸುತ್ತಿದ್ದ.
ಇಂದು ಮಧ್ಯಾಹ್ನ ತಂದೆ ಮಗನ ಜೊತೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಶುರುವಾಗಿದೆ. ಈ ವೇಳೆ ಚಾಕುವಿನಿಂದ ಮಗನನ್ನ ಇರಿದು ತಂದೆ ಗುರುರಾಜ್ ಕೊಲೆ ಮಾಡಿದ್ದಾನೆ.
ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಆಮ್ ಆದ್ಮಿ ಪಾರ್ಟಿಗೆ ವಕೀಲ ಜಗದೀಶ್ ಸೇರ್ಪಡೆ