More

    ಚಿರತೆಯನ್ನೇ ಎದುರಿಸಿ ಏಳು ವರ್ಷದ ಮಗಳನ್ನು ರಕ್ಷಿಸಿದ ತಂದೆ!

    ತುಮಕೂರು: ರಾಜ್ಯದಲ್ಲಿ ಕಾಡಿನಿಂದ ನಾಡಿಗೆ ಚಿರತೆಗಳು ಬರುತ್ತಿರುವ ಪ್ರಕರಣ ದಿನವೂ ಅಲ್ಲೊಂದು ಇಲ್ಲೊಂದರಂತೆ ಕೇಳಿ ಬರುತ್ತಿದೆ. ಹೀಗಾಗಿ ಬೆಂಗಳೂರಿನ ಕೆಲವು ಭಾಗದವರೂ ಸೇರಿದಂತೆ ರಾಜ್ಯದ ಹಲವೆಡೆ ಜನರು ಆತಂಕದಲ್ಲೇ ಕಾಲ ಕಳೆಯುವಂತಾಗಿದೆ.

    ಮೂರ್ನಾಲ್ಕು ದಿನಗಳ ಹಿಂದೆ ರಾಜಧಾನಿ ಬೆಂಗಳೂರಿನಲ್ಲಿ ಅಪಾರ್ಟ್​ಮೆಂಟ್ ಪಾರ್ಕಿಂಗ್ ಸ್ಥಳಕ್ಕೂ ಚಿರತೆ ಬಂದು ಹೋದ ಪ್ರಕರಣ ನಡೆದಿದೆ. ಇದೀಗ ಬಾಲಕಿಯೊಬ್ಬಳು ಚಿರತೆಯಿಂದ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಪ್ರಸಂಗ ನಡೆದಿದೆ.

    ಇದನ್ನೂ ಓದಿ: 12 ವರ್ಷಗಳಿಂದ ಇನ್ಶೂರೆನ್ಸ್ ಇಲ್ಲದ ವಾಹನದಲ್ಲಿ ಪೊಲೀಸರ ಡ್ಯೂಟಿ; ಸ್ಥಳೀಯ ವ್ಯಕ್ತಿ ಅಧಿಕಾರಿಯನ್ನೇ ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡ!

    ತುಮಕೂರು ಜಿಲ್ಲೆಯ ಚಿಕ್ಕಬೆಳ್ಳಾವಿಯಲ್ಲಿ ಮಂಗಳವಾರ ಸಂಜೆ ಈ ಪ್ರಕರಣ ನಡೆದಿದ್ದು, ಲೇಖನ ಎಂಬ ಏಳು ವರ್ಷದ ಬಾಲಕಿ ಚಿರತೆಗೆ ಬಲಿಯಾಗುವುದರಿಂದ ಪಾರಾಗಿದ್ದಾಳೆ. ವಿಶೇಷವೆಂದರೆ ಈಕೆಯ ತಂದೆಯೇ ಇವಳನ್ನು ರಕ್ಷಿಸಿದ್ದಾರೆ. ತಂದೆ ರಾಕೇಶ್ ಚಿರತೆಯನ್ನೇ ಎದುರಿಸಿ ಮಗಳನ್ನು ರಕ್ಷಣೆ ಮಾಡಿಕೊಂಡಿದ್ದಾರೆ.

    ಇದನ್ನೂ ಓದಿ: ಹಾಲು ಕುಡಿಯಲು ಯಾವ ಸಮಯ ಉತ್ತಮ?: ಆಯುರ್ವೇದ ಏನು ಹೇಳುತ್ತದೆ?

    ಮಂಗಳವಾರ ಸಂಜೆ ಮನೆಯ ಅಂಗಳದಲ್ಲಿ ಲೇಖನ ಆಟ ಆಡುತ್ತಿದ್ದಾಗ ಚಿರತೆ ಏಕಾಏಕಿ ದಾಳಿ ನಡೆಸಿದೆ. ಈ ವೇಳೆ ತಂದೆ ರಾಕೇಶ್ ಚಿರತೆಯನ್ನು ಎದುರಿಸಿ ಜೋರಾಗಿ ಕೂಗಿ, ದೊಣ್ಣೆಯಿಂದ ಬೆದರಿಸಿದ್ದಾರೆ. ಆಗ ಚಿರತೆ ಬಾಲಕಿಯನ್ನು ಬಿಟ್ಟು ಹೋಗಿದೆ. ಆಕೆಯ ಕಾಲಿಗೆ ಪರಚಿದ ಗಾಯಗಳಾಗಿವೆ. ಬೆಳ್ಳಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಅಧಿಕಾರಕ್ಕೆ ಬಂದರೆ ಒಬಿಸಿಯವರಿಗೇ ಸಿಎಂ ಪಟ್ಟ: ಪ್ರಧಾನಿ ಮೋದಿ ಭರವಸೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts