More

    ಅನ್ಯಜಾತಿ ಯುವಕನೊಂದಿಗೆ ಪ್ರೀತಿ; ಮರ್ಯಾದೆಗೆ ಅಂಜಿ ಮಗಳನ್ನು ಹತ್ಯೆಗೈದ ತಂದೆ

    ಬೆಂಗಳೂರು: ಅನ್ಯ ಜಾತಿಯ ಹುಡುಗನನ್ನು ಪ್ರೀತಿಸುತ್ತಿದ್ದಳು ಎಂಬ ಕಾರಣಕ್ಕೆ ತಂದೆಯೇ ಮಗಳ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ.

    ಮೃತ ದುರ್ದೈವಿಯನ್ನು ಕವನ (20) ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಆರೋಪಿ ಮಂಜುನಾಥ್​ (47) ಪೊಲೀಸರಿಗೆ ಶರಣಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ.

    ಪ್ರಕರಣದ ಹಿನ್ನಲೆ

    ಆರೋಪಿ ಮಂಜುನಾಥ್​ಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಅವರ ಕಿರಿಯ ಮಗಳು ಪ್ರೀತಿಯ ಬಲೆಗೆ ಬಿದ್ದು ಪ್ರಿಯಕರನ ಜೊತೆಗೆ ಹೋಗುವುದಾಗಿ ಕಳೆದ ಮಂಗಳವಾರ ಪೊಲೀಸ್ ಠಾಣಾ ಮೆಟ್ಟಿಲೇರಿದ್ದಳು. ಪ್ರೀತಿಸಿದವನ ಜೊತೆ ಹೋಗುವುದಾಗಿ ಠಾಣೆಯಲ್ಲಿ ಪಟ್ಟು ಹಿಡಿದಿದ್ದು, ಪೊಲೀಸರು ಆಕೆಯನ್ನು ಸಾಂತ್ವಾನ ಕೇಂದ್ರಕ್ಕೆ ಕಳುಹಿಸಿದ್ದಾರೆ.

    honour Killing

    ಇದರ ಬೆನ್ನಲ್ಲೇ ಹಿರಿ‌ ಮಗಳು ಸಹ ಪ್ರೀತಿ ಬಲೆಯಲ್ಲಿರುವ ವಿಚಾರ ತಿಳಿದಿದ್ದ ತಂದೆ ಮಂಜುನಾಥ್, ಚಿಕ್ಕ ಮಗಳು ಮರ್ಯಾದೆ ಕಳೆದಳು, ಇನ್ನು ಇವಳು ಕೂಡ ಗ್ರಾಮದಲ್ಲಿ ನಮ್ಮ ಮರ್ಯಾದೆ ಕಳೆಯುತ್ತಾಳೆ ಅಂತ ಹಿರಿ ಮಗಳನ್ನು ಕೊಲೆ ಮಾಡಿದ್ದಾನೆ.

    ಇದನ್ನೂ ಓದಿ: VIDEO| ಒಂದೇ ಎಸೆತದಲ್ಲಿ 13 ರನ್​ ಗಳಿಸಿ ವಿಶಿಷ್ಟ ಸಾಧನೆ ಮಾಡಿದ ನ್ಯೂಜಿಲೆಂಡ್ ಬ್ಯಾಟರ್

    ಹಿರಿಯ ಮಗಳ ಪ್ರೀತಿ ವಿಚಾರ ತಿಳಿದು ತೀವ್ರವಾಗಿ ನೊಂದಿದ್ದ ಮಂಜುನಾಥ್​ ಮಗಳಿಗೆ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿದ್ದರು. ಇದೇ ವಿಚಾರವಾಗಿ ತಂದೆ ಮಗಳ ನಡುವೆ ಬುಧವಾರ ರಾತ್ರಿ ಜಗಳವೂ ಸಹ ನಡೆದಿತ್ತು. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಆರೋಪಿ ಮಂಜುನಾಥ್​ ಮಗಳ ಕತ್ತನ್ನು ಚಾಕುವಿನಿಂದ ಸೀಳಿ ಕೈ-ಕಾಲು ಭಾಗಕ್ಕೆ ಇರಿದು ಕೊಲೆ ಮಾಡಿದ್ದಾನೆ. ಬಳಿಕ ವಿಶ್ವನಾಥಪುರ ಪೊಲೀಸ್​ ಠಾಣೆಗೆ ತೆರಳಿ ಶರಣಾಗಿದ್ದಾನೆ.

    ಘಟನೆ ನಂತರ ನೂರಾರು ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕಳೆದ ತಿಂಗಳು ಕೋಲಾರ ಜಿಲ್ಲೆಯಲ್ಲಿ ವರದಿಯಾದ ಎರಡು ಮರ್ಯಾದಾ ಹತ್ಯೆಗಳ ಬೆನ್ನಲ್ಲೇ ಈ ಘಟನೆ ನಡೆದಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts