ವಿಜಯಪುರ: ರಾಜಧಾನಿ ಬೆಂಗಳೂರಿನಲ್ಲಿ ವಾಲಿದ್ದ ಮೂರಂತಸ್ತಿನ ಕಟ್ಟಡವೊಂದು ಕುಸಿದು ನೆಲಸಮಗೊಂಡ ಬೆನ್ನಿಗೇ ರಾಜ್ಯದ ಮತ್ತೊಂದೆಡೆ ಸೇತುವೆಯೊಂದರಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಅದು ಮುರಿದು ಬೀಳುವ ಸಾಧ್ಯತೆ ಇರುವುದರಿಂದ ಆತಂಕವೂ ಸೃಷ್ಟಿಯಾಗಿದೆ.
ವಿಜಯಪುರ ಜಿಲ್ಲೆ ಮಿಣಜಗಿ ಗ್ರಾಮದ ಬಳಿ ರಾಜ್ಯ ಹೆದ್ದಾರಿ-61ರಲ್ಲಿ ಡೋಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಯಲ್ಲಿ ಈ ಬಿರುಕು ಕಂಡುಬಂದಿದೆ. ಬಿರುಕು ಬಿಟ್ಟ ಕಾರಣ ಸೇತುವೆ ಬೆಂಡಾಗಿದ್ದು, ಕುಸಿದು ಬೀಳುವ ಆತಂಕ ಉಂಟಾಗಿದೆ.
ಇದನ್ನೂ ಓದಿ: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೊಂದು ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು…
ಪರಿಣಾಮವಾಗಿ ರಾಜ್ಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದ್ದು, ವಿಜಯಪುರ, ತಾಳಿಕೋಟೆ, ಮುದ್ದೇಬಿಹಾಳ ಸಂಪರ್ಕ ಬಂದ್ ಆಗಿದೆ. ಅಗತ್ಯವಾದರೆ ದೇವರಹಿಪ್ಪರಗಿ ಪಟ್ಟಣದ ಮೂಲಕ ಸುತ್ತು ಹಾಕಿ ಹೋಗುವ ಅನಿವಾರ್ಯತೆ ಉಂಟಾಗಿದೆ.
ಸಾಮಾನ್ಯವಾಗಿ ಈ ಹೆದ್ದಾರಿಯಲ್ಲಿ ನಿತ್ಯ 20 ಸಾವಿರಕ್ಕೂ ಅಧಿಕ ವಾಹನಗಳು ಸಂಚರಿಸುತ್ತವೆ. ಸ್ಥಳಕ್ಕೆ ಮುದ್ದೇಬಿಹಾಳ ಕ್ಷೇತ್ರದ ಶಾಸಕ ಎ.ಎಸ್. ಪಾಟೀಲ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ.
ಸಮನ್ಸ್ ನೀಡಲು ಬಂದಿದ್ದ ಪೊಲೀಸ್, ಅತ್ಯಾಚಾರ ಮಾಡಿದ, ಗರ್ಭಪಾತವನ್ನೂ ಮಾಡಿಸಿದ; ವಿಡಿಯೋ ವೈರಲ್…