ಸೇತುವೆಯಲ್ಲಿ ಬಿರುಕು, ಮುರಿದು ಬೀಳುವ ಆತಂಕ; ಸಾವಿರಾರು ವಾಹನಗಳು ಸಂಚರಿಸುವ ಸಂಪರ್ಕ ಮಾರ್ಗವೇ ಬಂದ್​

ವಿಜಯಪುರ: ರಾಜಧಾನಿ ಬೆಂಗಳೂರಿನಲ್ಲಿ ವಾಲಿದ್ದ ಮೂರಂತಸ್ತಿನ ಕಟ್ಟಡವೊಂದು ಕುಸಿದು ನೆಲಸಮಗೊಂಡ ಬೆನ್ನಿಗೇ ರಾಜ್ಯದ ಮತ್ತೊಂದೆಡೆ ಸೇತುವೆಯೊಂದರಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಅದು ಮುರಿದು ಬೀಳುವ ಸಾಧ್ಯತೆ ಇರುವುದರಿಂದ ಆತಂಕವೂ ಸೃಷ್ಟಿಯಾಗಿದೆ. ವಿಜಯಪುರ ಜಿಲ್ಲೆ ಮಿಣಜಗಿ ಗ್ರಾಮದ ಬಳಿ ರಾಜ್ಯ ಹೆದ್ದಾರಿ-61ರಲ್ಲಿ ಡೋಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಯಲ್ಲಿ ಈ ಬಿರುಕು ಕಂಡುಬಂದಿದೆ. ಬಿರುಕು ಬಿಟ್ಟ ಕಾರಣ ಸೇತುವೆ ಬೆಂಡಾಗಿದ್ದು, ಕುಸಿದು ಬೀಳುವ ಆತಂಕ ಉಂಟಾಗಿದೆ. ಇದನ್ನೂ ಓದಿ: ಎಲೆಕ್ಟ್ರಾನಿಕ್​ ಸಿಟಿ ಫ್ಲೈಓವರ್ ಮೇಲೆ ಮತ್ತೊಂದು ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ … Continue reading ಸೇತುವೆಯಲ್ಲಿ ಬಿರುಕು, ಮುರಿದು ಬೀಳುವ ಆತಂಕ; ಸಾವಿರಾರು ವಾಹನಗಳು ಸಂಚರಿಸುವ ಸಂಪರ್ಕ ಮಾರ್ಗವೇ ಬಂದ್​