More

    ಗುಮ್ಮಟನಗರಿಯಲ್ಲಿ ಮತ್ತೆ ಭೂ ಕಂಪನ

    ವಿಜಯಪುರ: ಬಬಲೇಶ್ವರ ತಾಲೂಕಿನ ಅಡವಿ ಸಂಗಾಪುರದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು ಜನ ಆತಂಕಗೊಂಡಿದ್ದಾರೆ.

    ಗುರುವಾರ ತಡರಾತ್ರಿ ಈ ಘಟನೆ ನಡೆದಿದ್ದು ಬೆಳಗಿನವರೆಗೂ ಗ್ರಾಮಸ್ಥರು ಜಾಗರಣೆ ನಡೆಸಿದ್ದಾರೆ. ರಾತ್ರಿ ಭಾರೀ ಪ್ರಮಾಣದಲ್ಲಿ ಶಬ್ದ ಕೇಳಿ ಬರುತ್ತಿದ್ದಂತೆ ಮನೆಯಿಂದ ಹೊರ ಓಡಿ ಬಂದಿದ್ದಾರೆ. ಇದರ ಜೊತೆಗೆ ಕಳೆದ ಮೂರು ದಿನಗಳಿಂದ ಭಾರಿ ಪ್ರಮಾಣದ ಭೂಮಿ ಕಂಪನವಾಗಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

    ಕಂಪನದ ಅನುಭವಕ್ಕೆ ಮನೆಯಲ್ಲಿರುವ ಚಿಕ್ಕ ಮಕ್ಕಳು ಬೆಚ್ಚಿಬಿದ್ದು ಕಣ್ಣೀರು ಹಾಕುತ್ತಿದ್ದಾರೆ. ಅಲ್ಲದೇ, ಮನೆಗಳಲ್ಲಿನ ಸಾಮಗ್ರಿಗಳು ಕೆಳಗೆ ಬಿದ್ದಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಭಾರೀ ಸದ್ದಿಗೆ ಗ್ರಾಮಸ್ಥರು ಕೆಲಕಾಲ ಮನೆಯಿಂದ ಹೊರ ಬಂದು, ಭಯ ಭೀತಿಯಲ್ಲಿ ಹೊರಗಡೆ ನಿಂತುಕೊಂಡು ರಾತ್ರಿಯಿಡೀ ಜಾಗರಣೆ ಮಾಡಿದ್ದಾರೆ.

    ಇನ್ನಾದ್ರೂ ಘಟನಾ ಸ್ಥಳಕ್ಕೆ ವಿಜಯಪುರ ಭೂ ವಿಜ್ಞಾನಿಗಳ ತಂಡ ಹಾಗೂ ಜಿಲ್ಲಾಡಳಿತದವರು ಭೇಟಿ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts