More

    31ರಂದು ಸಚಿವ ಮಧು ಬಂಗಾರಪ್ಪಗೆ ಅಭಿನಂದನಾ ಸಮಾರಂಭ

    ಶಿವಮೊಗ್ಗ: ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿರುವ ಮಧು ಬಂಗಾರಪ್ಪ ಅವರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಮೇ 31ರಂದು ಅಭಿನಂದನಾ ಸಮಾರಂಭ ಆಯೋಜಿಸಿದೆ.

    ಅಂದು 9.45ಕ್ಕೆ ಸಚಿವ ಮಧು ಬಂಗಾರಪ್ಪ ಹರಿಗೆ ಸರ್ಕಾರಿ ಶಾಲೆಗಳಿಗೆ ತೆರಳಿ ಶಾಲಾ ಪ್ರಾರಂಭೋತ್ಸವಲ್ಲಿ ಪಾಲ್ಗೊಂಡು ಮಕ್ಕಳಿಗೆ ಸಿಹಿ ವಿತರಿಸಿ ಶುಭ ಹಾರೈಸುವರು. ಪಕ್ಷ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಔಪಚಾರಿಕವಾಗಿ ಅಧಿಕಾರಿಗಳ ಸಭೆ ನಡೆಸುವರು.
    ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಸಚಿವರಾದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿರುವ ಮಧು ಬಂಗಾರಪ್ಪ ಅವರು 31ರಂದು ಬೆಳಗ್ಗೆ 9.30ಕ್ಕೆ ಮಲವಗೊಪ್ಪದ ಚೆನ್ನಬಸವೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸುವರು. 10ಕ್ಕೆ ಎಂಆರ್‌ಎಸ್‌ನಿಂದ ಬೈಕ್ ರ‌್ಯಾಲಿ ಮೂಲಕ ಸಚಿವರಿಗೆ ಭರ್ಜರಿ ಸ್ವಾಗತ ಕೋರಲಾಗುವುದು ಎಂದು ತಿಳಿಸಿದರು.
    ರ‌್ಯಾಲಿ ಎಂಆರ್‌ಎಸ್‌ನಿಂದ ಸಹ್ಯಾದ್ರಿ ಕಾಲೇಜು, ಹೊಳೆ ಬಸ್ ನಿಲ್ದಾಣ, ಮೀನಾಕ್ಷಿ ಭವನ, ಶಿವಪ್ಪ ನಾಯಕ ವೃತ್ತ, ಅಶೋಕ ವೃತ್ತ, ಸಾಗರ ರಸ್ತೆ ಮಾರ್ಗವಾಗಿ ಹೆಲಿಪ್ಯಾಡ್ ಸಮೀಪದ ಈಡಿಗರ ಭವನ ತಲುಪಲಿದೆ. 10.30ಕ್ಕೆ ಈಡಿಗರ ಭವನದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಂಡಿದ್ದು, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಮತ್ತು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ, ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ ಸೇರಿದಂತೆ ಮಾಜಿ ಶಾಸಕರು, ಮಾಜಿ ಎಂಎಲ್‌ಸಿಗಳು ಮತ್ತು ಪಕ್ಷದ ಮುಖಂಡರು ಪಾಲ್ಗೊಳ್ಳುವರು ಎಂದರು.
    ಜಿಪಂ ಮಾಜಿ ಸದಸ್ಯ ಕಲಗೋಡು ರತ್ನಾಕರ, ಪ್ರಮುಖರಾದ ಇಸ್ಮಾಯಿಲ್ ಖಾನ್, ವಿಶ್ವನಾಥ ಕಾಶಿ, ಆರ್.ಸಿ.ನಾಯ್ಕ, ಚಂದ್ರಶೇಖರ್, ಜಿ.ಡಿ.ಮಂಜುನಾಥ, ಸಿ.ಎಸ್.ಚಂದ್ರಭೂಪಲ್, ರೇಖಾ ರಂಗನಾಥ, ಯಮುನಾ ರಂಗೇಗೌಡ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts