ಏಕತೆ ಬೆಳೆಸುವಲ್ಲಿ ಹಬ್ಬಗಳು ಸಹಕಾರಿ

blank

ಬೆಳಗಾವಿ: ಸಾಂಸ್ಕೃತಿಕ ಪರಂಪರೆ ಉಳಿಸಲು ಹಾಗೂ ಸಾರ್ವಜನಿಕರಲ್ಲಿ ಏಕತೆ ಬೆಳೆಸುವಲ್ಲಿ ಕನ್ನಡ ಹಬ್ಬದಂತಹ ಕಾರ್ಯಕ್ರಮ ಸಹಕಾರಿಯಾಗಿವೆ ಎಂದು ಸುರೇಶ ಅಂಗಡಿ ಶಿಕ್ಷಣ ಪ್ರತಿಷ್ಠಾಣದ ಕಾರ್ಯಾಧ್ಯಕ್ಷೆ, ಮಾಜಿ ಸಂಸದೆ ಮಂಗಲ ಅಂಗಡಿ ಹೇಳಿದರು.
ನಗರದ ಅಂಗಡಿ ತಾಂತ್ರಿಕ ಮತ್ತು ವ್ಯವಸ್ಥಾಪನಾ ಮಹಾವಿದ್ಯಾಲಯದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಕನ್ನಡ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯಾವುದೇ ಭಾಷೆ ಬೆಳೆವಣಿಗೆಯು ಬಳಕೆಯ ಮೇಲೆ ಅವಲಂಬನೆಯಾಗಿರುತ್ತದೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕನ್ನಡ ಬಳಸುವ ಮೂಲಕ ಶಿಕ್ಷಣ ವ್ಯವಸ್ಥೆಯಲ್ಲಿ ಕನ್ನಡದ ಕಂಪು ಪಸರಿಸುವಂತೆ ಮಾಡಬೇಕು. ಕನ್ನಡ ಅಸ್ಮಿತೆ ಉಳಿಸಿಕೊಳ್ಳಬೇಕು. ರಾಜ್ಯವು ಸಂಸ್ಕೃತಿ, ಕಲೆ ಮತ್ತು ಕೌಶಲಗಳ ನಾಡಾಗಿದ್ದು, ಉನ್ನತ ಶಿಕ್ಷಣಕ್ಕೆ ಬೇರೆ ರಾಜ್ಯಗಳಿಗಿಂತ ಪ್ರಾಮುಖ್ಯತೆ ಕೊಟ್ಟಿದೆ. ಉನ್ನತ ತಾಂತ್ರಿಕ ಶಿಕ್ಷಣವನ್ನು ಒದಗಿಸುವಲ್ಲಿ ಯಶಸ್ಸ ಪಡೆದಿದೆ ಎಂದರು.
ಇದೇ ವೇಳೆ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಅಂಗಡಿ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಡಾ.ಸ್ಪೂರ್ತಿ ಅಂಗಡಿ ಪಾಟೀಲ, ಆಡಳಿತಾಧಿಕಾರಿ ರಾಜು ಜೋಶಿ, ಪ್ರಾಚಾರ್ಯ ಡಾ. ಆನಂದ ದೇಶಪಾಂಡೆ, ಡಾ.ಕಿರಣ ಪೋತದಾರ, ಪ್ರೊ.ಗೌತಮ ದೆಮಟ್ಟಿ ಇತರರಿದ್ದರು. ದೀಪಾ ಬೆಣ್ಣಿ ನಿರೂಪಿಸಿ, ವಂದಿಸಿದರು.

Share This Article

ನಿಮ್ಮ ಸ್ಮಾರ್ಟ್​ಫೋನ್​ ನಿಮ್ಮ ಫಿಟ್​ನೆಸ್​ ಕೋಚ್​… ಆಶ್ಚರ್ಯವಾಯಿತೇ? ಇಲ್ಲಿದೆ ಅಚ್ಚರಿ ಮಾಹಿತಿ… Smartphone

Smartphone : ಸ್ಮಾರ್ಟ್‌ಫೋನ್‌ಗಳ ಮೇಲಿನ ಅವಲಂಬನೆ ದಿನೇ ದಿನೇ ಹೆಚ್ಚಾಗುತ್ತಿದೆ. ಒಂದು ಅಧ್ಯಯನದ ಪ್ರಕಾರ, 2040ರ…

ಈ ದಿನಾಂಕಗಳಂದು ಜನಿಸಿದವರು ತಮ್ಮ ಬುದ್ಧಿವಂತಿಕೆಯಿಂದಾಗಿ ರಾಯಲ್​ ಲೈಫ್​ ನಡೆಸುತ್ತಾರೆ! Numerology

Numerology : ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರ ಮತ್ತು ಹಸ್ತಸಾಮುದ್ರಿಕ ಶಾಸ್ತ್ರವೂ…

ನೀವು ಬೆಳಿಗ್ಗೆ ತಿಂಡಿಯನ್ನು ತಡವಾಗಿ ತಿನ್ನುತ್ತೀರಾ? ಎಚ್ಚರ..ಈ ಕಾಯಿಲೆ ಬರೋದು ಪಕ್ಕಾ… breakfast

breakfast: ಬೆಳಗಿನ ಉಪಾಹಾರವು ದೇಹಕ್ಕೆ ಬಹಳ ಮುಖ್ಯ. ಯಾವುದೇ ಕಾರಣಕ್ಕೂ ಉಪಹಾರವನ್ನು ಬಿಡಬಾರದು. ತಡವಾಗಿ ತಿನ್ನುವುದು…