ಕೋಲಾರ: ಆಂಧ್ರದ ರಾಯಲಸೀಮಾದ ರಕ್ತಸಿಕ್ತ ರಾಜಕೀಯದಂತೆ ರಾಜ್ಯದಲ್ಲೂ ರಾಜಕೀಯ ಕೊಲೆಗಳಿಗೆ ಕುಖ್ಯಾತಿ ಪಡೆದಿದ್ದ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಮತ್ತೆ ನೆತ್ತರು ಹರಿದಿದೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಪ್ತ, ಜಿಲ್ಲಾ ಪಂಚಾಯ್ತಿತಿ ಮಾಜಿ ಅಧ್ಯಕ್ಷ ಕಾಂಗ್ರೆಸ್ ಮುಖಂಡ ಎಂ.ಶ್ರೀನಿವಾಸ್ ಅವರು ಬರ್ಬರವಾಗಿ ಹತ್ಯೆಯಾಗಿದ್ದಾರೆ.
ಇದನ್ನೂ ಓದಿ: ಎಮ್ಮೆ ತೊಳೆಯಲು ಹೋಗಿ ಇಬ್ಬರು ಬಾಲಕರು ನೀರುಪಾಲು
ಶ್ರೀನಿವಾಸಪುರ ತಾಲೂಕು ಹೊಗಳಗೆರೆ ಬಳಿ ಆರು ಮಂದಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದು, ಅವರನ್ನು ಕೂಡಲೇ ಕೋಲಾರದ ಜಾಲಪ್ಪ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಎಂ.ಶ್ರೀನಿವಾಸ್ ಹೊಗಳಗೆರೆ ಬಳಿ ಬಾರ್ ನಡೆಸುತ್ತಿದ್ದು, ಕಟ್ಟಡ ಕಾಮಗಾರಿ ವೀಕ್ಷಿಸಸುತ್ತಿದ್ದ ವೇಳೆ ತಂಡ ಮಾರಕಾಸ್ತ್ರಗಳಿಂದ ದಾಳಿ ಮಾಡಿತ್ತು. ಆಸ್ಪತ್ರೆಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಭೇಟಿ ಕಣ್ಣೀರು ಹಾಕಿದ್ದಾರೆ.
ರಾಜಕೀಯ ಜಿದ್ದಾಜಿದ್ದಿಗೆ ಹೆಸರುವಾಸಿಯಾಗಿರುವ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರ ಜೆಡಿಎಸ್, ಕಾಂಗ್ರೆಸ್ ನಡುವಿನ ರಕ್ತಸಿಕ್ತ ರಾಜಕೀಯವನ್ನು ಕಂಡಿದೆ. ಇದೀಗ ದ್ವೇಷದ ರಾಜಕಾರಣಕ್ಕೆ ಶ್ರೀನಿವಾಸ್ ಬಲಿಯಾಗಿದ್ದಾರೆ.