More

    ಕಾಂಗ್ರೆಸ್ ಅಭ್ಯರ್ಥಿ ಪರ ಬಿರುಸಿನ ಪ್ರಚಾರ

    ಕೆ.ಎಂ.ದೊಡ್ಡಿ: ಕಾಂಗ್ರೆಸ್ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಅವರ ಗೆಲುವಿಗೆ ವರದಾನವಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ತಿಳಿಸಿದರು.

    ಸಮೀಪದ ಯಡಗನಹಳ್ಳಿ, ಗೋಪನಹಳ್ಳಿ, ಚಿಕ್ಕರಸಿನಕೆರೆ, ಗುರುದೇವರಹಳ್ಳಿ, ಹುಣ್ಣನದೊಡ್ಡಿ, ಛತ್ರದಹೊಸಹಳ್ಳಿ ಗ್ರಾಮಗಳಲ್ಲಿ ಮಂಡ್ಯ ಲೋಕಸಭಾ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಪರ ಮತಯಾಚಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಜನಪರ ಆಡಳಿತ ನೀಡುತ್ತಿದ್ದು ಜಿಲ್ಲೆಯ ಜನತೆ ಕಾಂಗ್ರೆಸ್ ಪರವಾಗಿದ್ದು ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ನನ್ನ ತಂದೆ ಮಾಜಿ ಸಂಸದ ದಿ.ಜಿ.ಮಾದೇಗೌಡ ಅವರು ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ತಮ್ಮದೆ ಆದ ಕೊಡುಗೆ ನೀಡಿದ್ದು ಅವರು ಹಾಕಿಕೊಟ್ಟ ದಾರಿಯಲ್ಲಿ ನಾನು ಮತ್ತು ನನ್ನ ಪುತ್ರ ಆಶಯ್‌ಮಧು ನಡೆಯುತ್ತ ಕಾಂಗ್ರೆಸ್ ಪಕ್ಷದ ಏಳಿಗೆಗೆ ದುಡಿಯುತಿದ್ದೇವೆ ಎಂದರು.

    ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲುವಿಗೆ ಕಾಂಗ್ರೆಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು. ವಿಧಾನ ಪರಿಷತ್, ಸ್ಥಳೀಯ ಸಂಸ್ಥೆ, ದಕ್ಷಿಣ ಪದವೀಧರರ ಕ್ಷೇತ್ರ, ವಿಧಾನಸಭೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ದುಡಿದು ಕಾಂಗ್ರೆಸ್ ಪಕ್ಷ ಗೆಲವಿಗೆ ಶ್ರಮಿಸಿದ ರೀತಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

    ತಾಪಂ ಮಾಜಿ ಸದಸ್ಯರಾದ ಬಿ.ಗಿರೀಶ್, ಭರತೇಶ್, ಮುಖಂಡರಾದ ಆರ್.ಸಿದ್ದಪ್ಪ, ಮಣಿಗೆರೆ ಕೆ.ಕಬ್ಬಾಳಯ್ಯ, ವಿನಯ್ ಹೊನ್ನೇಗೌಡ, ಹಾಗಲಹಳ್ಳಿ ಪುಟ್ಟಸ್ವಾಮಿ, ಯಜಮಾನ್ ಶಿವಲಿಂಗೇಗೌಡ ಸೇರಿದಂತೆ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts