More

    ಒಂದೇ ಜಿಲ್ಲೆಯ 15 ಪುರುಷರ ಸಂತಾನಶಕ್ತಿ ಹರಣ; ಸ್ವಯಂಪ್ರೇರಿತರಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಗಮನಸೆಳೆದರು!

    ವಿಜಯಪುರ: ಜಿಲ್ಲೆಯ 15 ಪುರುಷರು ಸಂತಾನಶಕ್ತಿ ಹರಣ ಚಿಕಿತ್ಸೆಗೆ ಒಳಗಾಗುವ ಮೂಲಕ ಗಮನ ಸೆಳೆದಿದ್ದಾರೆ. ಬಿಎಲ್​ಡಿಇ ಡೀಮ್ಡ್ ವಿಶ್ವವಿದ್ಯಾಲಯದ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಪುರುಷರ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಶಿಬಿರದಲ್ಲಿ ಇವರು ಆಪರೇಷನ್​ಗೆ ಒಳಗಾದರು.

    ಡಾ.ಗಿರೀಶ ಕುಲ್ಲೋಳ್ಳಿ, ಡಾ.ತೇಜಸ್ವೀನಿ ವಲ್ಲಭ ಹಾಗೂ ಡಾ.ಎಂ.ಬಿ.ಪಾಟೀಲ ಶಸ್ತ್ರಚಿಕಿತ್ಸಾ ತಂಡವು ಈ ಶಿಬಿರದಲ್ಲಿ ಸ್ವಯಂಪ್ರೇರಿತರಾಗಿ ಆಗಮಿಸಿದ 15 ಪುರುಷರು ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ನೇರವೇರಿಸಿದರು.

    ಕಾಲೇಜು ಪ್ರಾಚಾರ್ಯ ಡಾ.ಅರವಿಂದ ಪಾಟೀಲ, ವೈದ್ಯಕೀಯ ಅಧೀಕ್ಷಕ ಡಾ.ರಾಜೇಶ ಹೊನ್ನುಟಗಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುರೇಶ ಚವಾಣ್, ತಾಲೂಕು ಆರೋಗ್ಯಾಧಿಕಾರಿ ಡಾ.ರಾಜೇಶ್ವರಿ ಗೋಲಗೇರಿ, ಡಾ.ಟಿ.ಎ.ಹಿಟ್ನಳ್ಳಿ, ಡಾ.ಬಾಲಕೃಷ್ಣ.ಜಿ.ಕೆ, ಡಾ.ಸಂತೋಷ ಶೆಟ್ಟಿ ಮತ್ತಿತರರಿದ್ದರು.

    ಖ್ಯಾತ ಗಾಯಕನ ಆಸ್ತಿಯೇ ಒತ್ತುವರಿ; ಭೂಮಾಫಿಯಾಗೆ ಕೈಜೋಡಿಸಿದ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ!?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts