ಗದಗ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕದಂತೆ ಆಣೆ ಪ್ರಮಾಣ ಮಾಡಿಸಿದ ಸ್ವಾಮೀಜಿ ವಿರುದ್ಧ ದೂರು ದಾಖಲಾಗಿದೆ.
ಬಿಜೆಪಿ ಪಕ್ಷವನ್ನು ತಿರಸ್ಕಾರ ಮಾಡಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಕ್ಕೆ ಮತ ಹಾಕುವಂತೆ ಲಕ್ಷ್ಮೇಶ್ವರ ತಾಲೂಕಿನ ಆದರಹಳ್ಳಿ ಗವಿಮಠದ ಶ್ರೀ ಕುಮಾರ ಮಹಾರಾಜ ಸ್ವಾಮಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ದೂರು ದಾಖಲಿಸಲಾಗಿದೆ.
ಇದನ್ನೂ ಓದಿ: ಭಾರತ ವಿರೋಧಿ ಚಟುವಟಿಕೆ ವಿರುದ್ಧ ಕ್ರಮ: ರಿಷಿ ಸುನಕ್ ಜತೆ ಪ್ರಧಾನಿ ಮೋದಿ ಚರ್ಚೆ
ಸ್ವಾಮೀಜಿ ಕರೆ
ಒಳ ಮೀಸಲಾತಿ ವಿರೋಧಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಲು ಸ್ವಾಮೀಜಿ ಕರೆ ನೀಡಿದ್ದರು. ಅಲ್ಲದೆ, ಆದರಹಳ್ಳಿ ಗ್ರಾಮಸ್ಥರಿಂದ ಸೇವಾಲಾಲ ಹಾಗೂ ಸಿದ್ದರಾಮೇಶ್ವರ ದೇವರ ಮೇಲೆ ಆಣೆ ಪ್ರಮಾಣ ಮಾಡಿಸಿದ್ದರು.
ನೀತಿ ಸಂಹಿತೆ ಉಲ್ಲಂಘನೆ ಆರೋಪ
ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಸ್ವಾಮೀಜಿಗಳ ವಿರುದ್ಧ ದೂರು ದಾಖಲಾಗಿದೆ. (ದಿಗ್ವಿಜಯ ನ್ಯೂಸ್)
ಸೊಸೆಯ ಅಶ್ಲೀಲ ಚಾಟಿಂಗ್: ಮಲಗಿದ್ದಲ್ಲೇ ಶವವಾದ ಅತ್ತೆ-ಮಾವನ ಸಾವಿನ ಹಿಂದಿನ ಭಯಾನಕತೆ ಬಯಲು
ಮದುವೆಗೂ ಮುನ್ನ ನಟನೊಂದಿಗೆ ಸಂಬಂಧ: ಖುಷ್ಬೂ ಬಗ್ಗೆ ಶಾಕಿಂಗ್ ಕಾಮೆಂಟ್ ಮಾಡಿದ ತೆಲುಗು ನಟಿ
ಅಂದುಕೊಂಡಿದ್ದನ್ನು ಮಾಡುತ್ತೇನೆ ಅಂತ ಬೆತ್ತಲೆ ಫೋಟೋ ಶೇರ್ ಮಾಡಿದ ಜೇಮ್ಸ್ ಬಾಂಡ್ ನಟಿ!