More

    ವಕೀಲರ ಮೇಲೆ ಸುಳ್ಳು ಪ್ರಕರಣ ದಾಖಲು

    ಚಿಕ್ಕಮಗಳೂರು: ರಾಮನಗರದ ಐಜೂರು ಪೊಲೀಸ್ ಠಾಣೆಯಲ್ಲಿ ಸುಮಾರು 40 ವಕೀಲರ ಮೇಲೆ ಸುಳ್ಳು ಪ್ರಕರಣ ದಾಖಲಿಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಕೀಲರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
    ವಕೀಲರ ಮೇಲೆ ದಾಖಲಿಸಿರುವ ಮೊಕದ್ದಮೆ ಕೂಡಲೇ ಕೈಬಿಡಬೇಕು. ಉದ್ದೇಶ ಪೂರ್ವಕವಾಗಿ ವಕೀಲರ ಮೇಲೆ ಸುಳ್ಳು ಪ್ರಕರಣ ದಾಖಲಿಸಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪೊಲೀಸರು ವಕೀಲರ ಮೇಲೆ ನಿರಂತರವಾಗಿ ಸುಳ್ಳು ಪ್ರಕರಣ ದಾಖಲಿಸುತ್ತಿದ್ದಾರೆ. ವಕೀಲರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ ಪೊಲೀಸರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.
    ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ಸುಧಾಕರ್ ಮಾತನಾಡಿ, ರಾಮನಗರದ ಜಿಲ್ಲಾ ನ್ಯಾಯಾಲಯದ ಸುಮಾರು 40 ವಕೀಲರ ಮೇಲೆ ಸುಳ್ಳು ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಇಂದು ವಕೀಲರ ಸಂಘದವರು ಪ್ರತಿಭಟನೆ ನಡೆಸುತ್ತಿದ್ದಾರೆ. ಚಿಕ್ಕಮಗಳೂರು ವಕೀಲರ ಸಂಘ ಈ ದಿನ ತುರ್ತು ಸಭೆಯನ್ನು ಕರೆದು ಚರ್ಚೆ ನಡೆಸಿ ಸುಳ್ಳು ಪ್ರಕರಣ ದಾಖಲಿಸಿದ ಪೊಲೀಸರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.
    ಸಂಘದ ಕಾರ್ಯದರ್ಶಿ ಟಿ.ಬಿ.ರುದ್ರೇಶ್, ಸಹ ಕಾಯದರ್ಶಿ ಪ್ರದೀಪ್, ಡಿ.ಬಿ ಸುಜೇಂದ್ರ, ಪರಮೇಶ್ವರ್, ಬಿ.ಆರ್.ಜಗದೀಶ್, ಕೃಷ್ಣಮೂರ್ತಿ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts