ಮುಂಬೈ: ರಾಮಾಯಣವನ್ನು ಆಧರಿಸಿ 700 ಕೋಟಿ ರೂಪಾಯಿ ವೆಚ್ಚದಲ್ಲಿ ತಯಾರಾಗುತ್ತಿದ್ದ ಬಾಲಿವುಡ್ನ ಬಿಗ್ ಬಜೆಟ್ ಚಲನಚಿತ್ರವು ದುರದೃಷ್ಟವಶಾತ್ 2 ತಿಂಗಳ ಚಿತ್ರೀಕರಣದ ಬಳಿಕ ನಿಂತು ಹೋಗಿದೆ. ಈ ಸಿನಿಮಾದಲ್ಲಿ ರಣಬೀರ್ ಕಪೂರ್ ಮತ್ತು ಸಾಯಿ ಪಲ್ಲವಿ ರಾಮ ಮತ್ತು ಸೀತೆಯ ಪಾತ್ರವನ್ನು ನಿರ್ವಹಿಸುತ್ತಿದ್ದು, ಇದಕ್ಕೆ ಸಂಬಂಧಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸೋರಿಕೆಯಾಗಿ ಭಾರಿ ಸುದ್ದಿಯಾಗಿತ್ತು.
ನಿತೇಶ್ ತಿವಾರಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ರಾಮಾಯಣ ಚಿತ್ರದ ವಿರುದ್ಧ ಕಾಪಿರೈಟ್ ಪ್ರಕರಣ ದಾಖಲಾಗಿರುವುದರಿಂದ ಸದ್ಯಕ್ಕೆ ಯೋಜನೆಯನ್ನು ಕೈಬಿಡಲಾಗಿದೆ. ಮುಂದಿನ ವರ್ಷದ ದೀಪಾವಳಿಗೆ ಚಿತ್ರದ ಮೊದಲ ಭಾಗವನ್ನು ಬಿಡುಗಡೆ ಮಾಡಲು ನಿರ್ಮಾಪಕರು ಯೋಜಿಸಿದ್ದರು. ಆದರೆ, ಅನಿರೀಕ್ಷಿತ ಬೆಳವಣಿಗೆಯೊಂದು ನಡೆದಿದೆ.
ಈ ಚಿತ್ರದ ಬಜೆಟ್ 700 ಕೋಟಿ ರೂ.ಗೂ ಹೆಚ್ಚು ಎನ್ನಲಾಗಿದೆ. ಇದರ ಮೊದಲ ನಿರ್ಮಾಪಕ ಮಧು ಮಂಟೇನಾ ಈ ಸಿನಿಮಾದಿಂದ ಹಿಂದೆ ಸರಿದಿದ್ದು, ಅವರಿಗೆ ಕೊಡಬೇಕಾದ ಹಣವನ್ನು ನೀಡದೆ ಚಿತ್ರೀಕರಣ ಮುಂದುವರಿಸಿರುವುದು ವಿವಾದಕ್ಕೆ ಕಾರಣವಾಗಿತ್ತು. ಈ ಕಾರಣದಿಂದ ಚಿತ್ರದ ಶೂಟಿಂಗ್ ನಿಲ್ಲಿಸುವಂತೆ ನೋಟಿಸ್ ಕಳುಹಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಸದ್ಯ ಚಿತ್ರತಂಡ ನೋಟಿಸ್ನ ವಿವರಗಳನ್ನು ಪರಿಶೀಲಿಸುತ್ತಿದೆ ಮತ್ತು ಕೆಲವೇ ವಾರಗಳಲ್ಲಿ ಚಿತ್ರೀಕರಣ ಪುನರಾರಂಭಗೊಳ್ಳುವ ನಿರೀಕ್ಷೆಯಿದೆ ಎಂದು ಸಿನಿಮಾ ಮೂಲಗಳು ತಿಳಿಸಿವೆ.
ಇನ್ನು ಶೂಟಿಂಗ್ ನಿಂತಿರುವುದರಿಂದ ಕಲಾವಿದರ ವೇಳಾಪಟ್ಟಿಯಲ್ಲಿ ಗೊಂದಲ ಉಂಟಾಗುವ ಸಾಧ್ಯತೆ ಇದೆ. ಈ ವರ್ಷದ ಕೊನೆಯಲ್ಲಿ ಲವ್ ಅಂಡ್ ವಾರ್ ಚಿತ್ರಕ್ಕಾಗಿ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರಿಗೆ ರಣಬೀರ್ ಕಪೂರ್ ಡೇಟ್ಸ್ ನೀಡಿದ್ದರು. ಈ ಚಿತ್ರದಲ್ಲಿ ಹನುಮಾನ್ ಪಾತ್ರದಲ್ಲಿ ನಟಿಸುತ್ತಿರುವ ಸನ್ನಿ ಡಿಯೋಲ್ ಕೂಡ ವರ್ಷಾಂತ್ಯದಲ್ಲಿ ತಮ್ಮ ಚಿತ್ರ ಬಿಡುಗಡೆಗೆ ಸಿದ್ಧತೆ ನಡೆಸಿದ್ದಾರೆ. ರಣಬೀರ್ನ ರಾಮ್ ಪಾತ್ರಕ್ಕೆ ರಾವಣನಾಗಿ ಕನ್ನಡದ ಸೂಪರ್ಸ್ಟಾರ್ ಯಶ್ ಬಣ್ಣ ಹಚ್ಚಲಿದ್ದಾರೆ ಎಂದು ವರದಿಯಾಗಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ದೇಶದ ಪ್ರಮುಖ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾದ ನಮಿತ್ ಮಲ್ಹೋತ್ರಾ ಅವರ ಪ್ರೈಮ್ ಫೋಕಸ್ ಸ್ಟುಡಿಯೋಸ್ ಮತ್ತು ಕನ್ನಡದ ಸೂಪರ್ ಸ್ಟಾರ್ ಯಶ್ ಅವರ ಮಾನ್ಸ್ಟರ್ ಮೈನ್ಸ್ ಕ್ರಿಯೇಷನ್ಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿದೆ. ಸಿನಿಮಾವನ್ನು 3 ಭಾಗಗಳಲ್ಲಿ ಬಿಡುಗಡೆ ಮಾಡುವ ಉದ್ದೇಶವಿದೆ. ಬಾಲಿವುಡ್ನ ನಟರು ಮಾತ್ರವಲ್ಲದೆ ಇತರ ಉದ್ಯಮಗಳಿಂದಲೂ ಸ್ಟಾರ್ ನಟರು ಪ್ರಮುಖ ಪಾತ್ರಗಳನ್ನು ನಿರ್ವಹಿಸಲಿದ್ದಾರೆ ಎನ್ನಲಾಗುತ್ತಿದೆ. ಸನ್ನಿ ಡಿಯೋಲ್, ಲಾರಾ ದತ್ತಾ, ರಾಕುಲ್ ಪ್ರೀತ್ ಸಿಂಗ್ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. (ಏಜೆನ್ಸೀಸ್)
ನಾನ್ ರೆಡಿ ಇದ್ದೇನೆ… ಬ್ರೇಕಪ್ ಬಗ್ಗೆ ಕೇಳಿದ್ದಕ್ಕೆ ಶ್ರುತಿ ಕೊಟ್ರು ಶಾಕಿಂಗ್ ಹೇಳಿಕೆ, ದಂಗಾದ್ರೂ ಫ್ಯಾನ್ಸ್!
ಸುಹಾನಾಳ ಜತೆ ಡೇಟಿಂಗ್ ಮಾಡಲು 7 ಷರತ್ತುಗಳನ್ನಿಟ್ಟ ಎಸ್ಆರ್ಕೆ! ಬಾಯ್ಫ್ರೆಂಡ್ ಕತೆ ಅಷ್ಟೇ ಅಂದ್ರು ನೆಟ್ಟಿಗರು
ಇದೇ ಮೊದಲ ಬಾರಿಗೆ ತಮ್ಮ ಲವ್ ಸ್ಟೋರಿ ಹೇಳಿದ್ರು ಸಿಎಂ ಸಿದ್ದು: ಈ ಕಾರಣಕ್ಕೆ ಲವ್ ಫೇಲ್ಯೂರ್ ಆಯ್ತಂತೆ!