ಮುಂಬೈ: ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಾಗುವ ನಿರ್ದೇಶಕ ರಾಮ್ಗೋಪಾಲ್ ವರ್ಮಾ ಇದೀಗ ಇದೇ ರೀತಿಯ ಹೇಳಿಕೆಯಿಂದ ಇಕ್ಕಟ್ಟಿಗೆ ಸಿಲುಕಿದ್ದಾರೆ. ಈ ಬಾರಿ ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮರ್ಮು ಅವರ ಬಗ್ಗೆ ಟ್ವೀಟ್ ಮಾಡಿರುವ ನಿರ್ದೇಶಕನ ವಿರುದ್ಧ ಬಿಜೆಪಿ ದೂರು ದಾಖಲಿಸಿದೆ.
ತೆಲಂಗಾಣದ ಬಿಜೆಪಿ ಮುಖಂಡರಾದ ಗುಡೂರು ನಾರಾಯಣ ರೆಡ್ಡಿ ಮತ್ತು ಟಿ.ನಂದೇಶ್ವರ್ ಗೌಡ ಎಂಬುವವರು ಹೈದರಾಬಾದ್ನ ಅಬಿಡ್ಜ್ ಪೊಲೀಸ್ ಠಾಣೆಯಲ್ಲಿ ವರ್ಮಾ ವಿರುದ್ಧ ದೂರು ದಾಖಲಿಸಿ ಬಿಸಿ ಮುಟ್ಟಿಸಿದ್ದಾರೆ.
ಎನ್ಡಿಎಯಿಂದ ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮರ್ಮು ಅವರ ಹೆಸರು ಘೋಷಣೆಯಾದ ಬಳಿಕ ಟ್ವೀಟ್ ಮಾಡಿದ್ದ ರಾಜಗೋಪಾಲ್ ವರ್ಮಾ, ದ್ರೌಪದಿಯವರು ರಾಷ್ಟ್ರಪತಿಯಾದರೆ ಪಾಂಡವರು ಮತ್ತು ಕೌರವರು ಯಾರು ಎಂದು ಟ್ವೀಟ್ ಮಾಡುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದರು.
ಈ ಎಲ್ಲಾ ವಿವಾದ ಹುಟ್ಟುಹಾಕಿದ ಬಳಿಕ ಎಚ್ಚೆತ್ತ ವರ್ಮಾ, ಇದನ್ನು ನಾನು ವ್ಯಂಗ್ಯವಾಗಿ ಹೇಳಿದೆಯಷ್ಟೇ, ಅದು ಬಿಟ್ಟರೆ ಬೇರೆ ಯಾವ ಉದ್ದೇಶವೂ ಇರಲಿಲ್ಲ. ಮಹಾಭಾರತದಲ್ಲಿ ದ್ರೌಪದಿ ನನ್ನ ಅಚ್ಚುಮೆಚ್ಚಿನ ಪಾತ್ರವಾಗಿರುವುದರಿಂದ, ಈಗ ರಾಷ್ಟ್ರಪತಿ ಅಭ್ಯರ್ಥಿಯಾಗಿರುವವರ ಹೆಸರು ಅದೇ ಇರುವುದರಿಂದ ಆ ಪಾತ್ರಕ್ಕೆ ಹೋಲಿಸಿ ಟ್ವೀಟ್ ಮಾಡಿದ್ದೇನೆ, ಯಾರ ಮನಸ್ಸಿಗೂ ನೋಯಿಸುವ ಉದ್ದೇಶ ಇರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. (ಏಜೆನ್ಸೀಸ್)
ಜುಲೈ ತಿಂಗಳಲ್ಲಿ 8 ದಿನಗಳು ಬ್ಯಾಂಕ್ಗಳಿಗೆ ರಜೆ: ಯಾವಾಗ, ಎಲ್ಲೆಲ್ಲಿ ಅನ್ವಯ ಇಲ್ಲಿದೆ ಮಾಹಿತಿ